ಮಾರ್ಚ್ 7ರಂದು ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ -Vishwanews24
ಮಾರ್ಚ್ 7ರಂದು ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ -Vishwanews24
ಬೆಂಗಳೂರು: ಮಾರ್ಚ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಿಡುಗಡೆಗೊಳಿಸಿದರು.
ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ -Vishwanews24
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿದೆ, ಕೋವಿಡ್ ಸಂದರ್ಭದಲ್ಲಿಯೂ ಕಲಾವಿದರಿಗೆ ಆಸರೆಯಾಗುವ ಮೂಲಕ ಮಾದರಿಯಾಗಿದ್ದೀರಿ, ಬೆಂಗಳೂರಿನ ನಗರದಲ್ಲಿ ತುಳು ಭಾಷಾ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿ, ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸುವ ಭರವಸೆ ನೀಡಿದರು.
ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24
ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಹಾಗೂ ಬಂದರುಗಳ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರು ಶುಭ ಹಾರೈಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಅವರು ಅಕಾಡೆಮಿಯ ಚಟುವಟಿಕೆಯ ಹಾಗೂ ಯೋಜನೆಗಳಿಗೆ ವಿಶೇಷ ಅನುದಾನದ ಬಗ್ಗೆ ಪ್ರಸ್ತಾಪಿಸಿ, ಕಳೆದ ಮೂರು ವರ್ಷದ ಅವಧಿಯ ಪ್ರಶಸ್ತಿ ಪುರಸ್ಕೃತ ಸಮಾರಂಭವನ್ನು ರಾಜಧಾನಿಯಲ್ಲಿ ನಡೆಸುವ ಉದ್ದೇಶವನ್ನು ವಿವರವಾಗಿ ತಿಳಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಸದಸ್ಯ ಸಂಚಾಲಕಿ ಕಾಂತಿ ಶೆಟ್ಟಿ ಬೆಂಗಳೂರು ಉಪಸ್ಥಿತರಿದ್ದರು.

