Featured

ಮಾರ್ಚ್23-24 ರಂದು ಸುಗ್ಗಿ ಮಾರಿಪೂಜೆ ಹಿನ್ನಲೆ -ಕಾಪು-ಮಜೂರು-ಮೂಳೂರು -ಪಡು ಎಲ್ಲಾ ಬಾರ್ ವೈನ್ ಶಾಪ್ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ.-vishwanews24

ಮಾರ್ಚ್23-24 ರಂದು ಸುಗ್ಗಿ ಮಾರಿಪೂಜೆ ಹಿನ್ನಲೆ -ಕಾಪು-ಮಜೂರು-ಮೂಳೂರು -ಪಡು ಎಲ್ಲಾ ಬಾರ್ ವೈನ್ ಶಾಪ್ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ.

ಕಾಪು: ಕಾಪು ತಾಲೂಕಿನ ಕಾಪುವಿನ ಮೂರು ಮಾರಿಗುಡಿಗಳಲ್ಲಿ ದಿನಾಂಕ 23/03/2021 ಮತ್ತು ದಿನಾಂಕ 24/03/2021 ರಂದು ಸುಗ್ಗಿ ಮಾರಿ ಪೂಜೆಯು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭೇಟಿ ನೀಡಲಿದ್ದು ಸದ್ರಿ ಮೂರು ಮಾರಿ ಗುಡಿಗಳು ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಇರುವುದರಿಂದ ಮಾರಿ ಪೂಜೆಗೆ ಬರುವವರ ಪೈಕಿ ಕೆಲವರು ಮಧ್ಯ ಸೇವಿಸಿ, ಅಮಲಿನಲ್ಲಿ ರಸ್ತೆ ದಾಟುವ ಬಗ್ಗೆ ಹಾಗೂ ರಾತ್ರಿ ವೇಳೆಗೆ ದೇವಸ್ಥಾನಕ್ಕೆ ಬರುವ ಜನರೊಂದಿಗೆ ಮದ್ಯ ಸೇವಿಸಿದವರು ಅಮಲಿನಲ್ಲಿ ಅಸಭ್ಯವಾಗಿ ವರ್ತಿಸುವ ಸಾಧ್ಯತೆ ಇದ್ದು, ಅಲ್ಲದೇ ರಸ್ತೆ ಅಪಘಾತಗಳು ನಡೆಯುವ ಸಾಧ್ಯತೆಯೂ ಇರುತ್ತದೆ. ಇದರಿಂದ ಕಾನೂನು ಸುವ್ಯಸ್ಥೆಗೆ ಧಕ್ಕೆಯಾಗುವ ಸಂಭವ ಇರುವುದಾಗಿದೆ. ಆದುದರಿಂದ ದಿನಾಂಕ: 23/03/2021 ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ 24/03/2021 ರ ರಾತ್ರಿ 12:00 ಗಂಟೆಯವರಗೆ ಸದ್ರಿ ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮದಲ್ಲಿರುವ ಬಾರ್ & ರೆಸ್ಟೋರೆಂಟ್, ವೈನ್ ಶಾಪಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಇವರು ಪತ್ರದಲ್ಲಿ ಕೋರಿರುತ್ತಾರೆ,

ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಇವರು ನೀಡಿರುವ ವರದಿಯಂತೆ ದಿನಾಂಕ:23/03/2021 ಮತ್ತು ದಿನಾಂಕ:24/03/2021 ರಂದು ಕಾಪು ತಾಲೂಕಿನ ಕಾಪುವಿನ ಮಾರಿ ಗುಡಿಗಳಲ್ಲಿ ನುಗ್ಗಿ ಮಾರಿ ಪೂಜೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವ್ಯನ್‌ಶಾಪ್‌ಗಳು ತರದಿದ್ದಲ್ಲಿ, ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿ ಜಗದೀಶ ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ ಆದ ನಾನು ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1961 ಕಲಂ 21ರನ್ವಯ ಅಧಿಕಾರವನ್ನು ಚಲಾಯಿಸಿ ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ದಿನಾಂಕ:23/03/2021 ರ ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ:24/03/2021 ರಂದು ರಾತ್ರಿ 12.00 ಗಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿದೆ. ಈ ಹಿನ್ನಲೆಯಲ್ಲಿ ಮೇಲೆ ತಿಳಿಸಲಾದ ದಿನಾಂಕದಂದು ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ (Dry Day) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

14 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago