Featured

ಮಾಲೂರು ಬಾಲಕಿಯ ಬರ್ಬರ ಹತ್ಯೆ:ರೇಖಾ ಚಿತ್ರ ಆಧರಿಸಿ ಕಾಮುಕ ವಶಕ್ಕೆ

ಮಾಲೂರು: ಪಟ್ಟಣದ ಬಿಜೆಎಸ್‌ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ಕಾಮುಕ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ರಂಜಿತ್‌ (22) ಎನ್ನುವವನಾಗಿದ್ದು, ಮಾಲೂರು ಮೂವದವನೇ ಆಗಿದ್ದಾನೆ ಎಂದು ತಿಳಿದು ಬಂದಿದೆ. ಮೃತ ಬಾಲಕಿಯ ಮನೆಯ ಬಳಿ ಗಾರೆ ಕೆಸಲಕ್ಕೆ ಆಗಮಿಸುತ್ತಿದ್ದ ಎಂದು ಹೇಳಲಾಗಿದೆ.

ಆರೋಪಿಯ ರೇಖಾ ಚಿತ್ರ ಬರೆದು ಪೊಲೀಸರು ಕಾರ್ಯಾಚರಣೆಗಿಳಿದಿದ್ದರು. ಅದರನ್ವಯ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಯನ್ನೂ ನಡೆಸಿದ್ದರು ಎಂದು ತಿಳಿದು ಬಂದಿದೆ.

ಪ್ರೀತಿ ನಿರಾಕರಿಸಿದ್ದೇ ಕಾರಣವೆ?
ಬಂಧಿತ ರಂಜಿತ್‌ ಬಾಲಕಿಯ ಬಳಿ ಪ್ರೀತಿ ನಿವೇದನೆ ಮಾಡಿಕೊಂಡಿದ್ದು, ತಿರಸ್ಕರಿಸಿದ ಕಾರಣಕ್ಕಾಗಿ ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂದೂ ಹೇಳಲಾಗಿದೆ. ಈ ಬಗ್ಗೆ ಪೊಲೀಸ್‌ ತನಿಖೆ ನಡೆಯುತ್ತಿದ್ದು ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ವ್ಯಾಪಕ ಆಕ್ರೋಶ 

ಆರೋಪಿಯ ಬಂಧನಕ್ಕೆ ಆಗ್ರಹಿಸಿ  ಮಾಲೂರಿನಲ್ಲಿ  ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದರು. 

ಮೂಲೂರು ತಾಲೂಕಿನಲ್ಲಿ ಅತ್ಯಂತ ಕರಾಳ ಎನ್ನುವ ಬಾಲಕಿ ಕೊಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ದಲಿತಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು, ಕೃಷಿಕ ಸಮಾಜದಲ್ಲಿ ಸಭೆ ನಡೆಸಿ ಶನಿವಾರ ಮಾಲೂರು ತಾಲೂಕು ಬಂದ್‌ ನಡೆಸಲು ತೀರ್ಮಾನಿದ್ದರು.

ಮಾಲೂರಿನ ಇಂದಿರಾ ನಗರದ ವಾಸಿ ಸ್ಥಳೀಯ ಕಾರ್ಖಾನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿಯ 15 ರ ಹರೆಯದ ಪುತ್ರಿ ಪಟ್ಟಣದ ಬಿಜೆಎಸ್‌ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಶಾಲೆಯಲ್ಲಿ ನಡೆದ ಕ್ರೀಡೆಗಳಲ್ಲಿ ಭಾಗವಹಿಸಿ ಪಕ್ಕದ ಇಂದಿರಾ ನಗರಕ್ಕೆ ಕಾಲ್ನಡಿಗೆಯಲ್ಲಿ ತನ್ನ ಗೆಳತಿಯೊಂದಿಗೆ ನಡೆದು ಕೊಂಡು ಹೋಗುತ್ತಿದ್ದಳು. ಈ ವೇಳೆ ರೈಲ್ವೆ ಸೇತುವೆ ಬಳಿ ಬಾಲಕಿಯನ್ನು ಅಡ್ಡಗಟ್ಟಿದ ದುಷ್ಕರ್ಮಿ ಆಕೆಯ ಬಟ್ಟೆಗಳನ್ನು ಹರೆದು ದುಷ್ಕೃತ್ಯ ಎಸಗಿದ್ದ. ಈ ವೇಳೆ ಜೊತೆಯಲ್ಲಿದ್ದ ಇನ್ನೊಬ್ಬವಿದ್ಯಾರ್ಥಿನಿ ಕಿರುಚಿಕೊಂಡು ಓಡಿಹೋಗಿದ್ದಳು. ಆಗ ಅರೆಬರೆ ಬಟ್ಟೆಯಲ್ಲಿ ಓಡಿ ಹೋಗಲು ಮುಂದಾದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಪಾಪಿ ತಲೆ ಮರೆಸಿಕೊಂಡಿದ್ದ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

16 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago