ಕಾಪು : ಕೊರೊನಾ ಮಹಾಮಾರಿಯಿಂದ ತೊಂದರೆಗೊಳಗಾದ ಯಕ್ಷಗಾನ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಕಾಪುವಿನ ಕಲಾಪ್ರೇಮಿಗಳು ಹುಟ್ಟುಹಾಕಿರುವ ಸಂಘಟನೆ “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನಾ ಸಮಾರಂಭ ಹಾಗೂ ಯಕ್ಷಗಾನ ಪ್ರದರ್ಶನ ಮಾ. 13ರಂದು ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಲಿದೆ ಎಂದು ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ತಿಳಿಸಿದ್ದಾರೆ.
ಅವರು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನೂತನ ಸಂಘಟನೆ ಅವಿರತ ಕೆಲಸ ಮಾಡಲಿದೆ. ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕಲಾವಿದರಿಗೆ ಸನ್ಮಾನ, ಅಶಕ್ತ ಹಾಗೂ ಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವ ಯೋಜನೆಯಿದ್ದು ಪ್ರತೀ ವರ್ಷ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಈ ಬಾರಿ ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿ ಇವರ “ಕಾರಣಿಕದ ಕೊರಗಜ್ಜ” ಯಕ್ಷಗಾನ ಆಯೋಜಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಅರುಣ್ ಶೆಟ್ಟಿ ಪಾದೂರು, ಸಂತೋಷ್ ಆರ್ ಶೆಟ್ಟಿ, ಪುರುಷೋತ್ತಮ ಸಾಲಿಯಾನ್, ಪ್ರಭಾತ್ ಕುಮಾರ್ ಶೆಟ್ಟಿ, ರಘುನಾಥ ಶೆಟ್ಟಿ, ಉಮೇಶ್ ಮಲ್ಲಾರ್ ಉಪಸ್ಥಿತರಿದ್ದರು.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…