Featured

ಮಾ. 21ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ – vishwanews24

ಮಾ. 21ರವರೆಗೆ ಕರಾವಳಿಯಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆ ಸಾಧ್ಯತೆ : 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ಸುಮಾರು 25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯ ತೀವ್ರತೆ ಮುಂದುವರಿಯಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ನಿರ್ಮಾಣವಾದ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಹಲವೆಡೆ ಈಗಾಗಲೇ ಅಕಸ್ಮಾತ್ ಮಳೆ ದಾಖಲಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲವೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

ಮಲೆನಾಡು, ಕರಾವಳಿ ಹಾಗೂ ಒಳನಾಡಿನ ಅನೇಕ ಭಾಗಗಳಲ್ಲಿ ಮಾರ್ಚ್ 21ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಇತ್ತ ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ವೇಳೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಗಾಳಿಯ ಪ್ರಭಾವ ಹೆಚ್ಚಿದರೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಇದನ್ನೂ ಓದಿ:

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

4 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

4 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

7 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

8 hours ago