ಮಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಶನಿವಾರ (ಮಾ.22) ದಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ.
ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ ಸಾಮಾನ್ಯ ದಿನಗಳಂತೆ ಬಸ್ ಗಳು ಓಡಾಡಲಿವೆ. ಸಾವರ್ಜನಿಕರ ಹಿತದೃಷ್ಟಿ, ಮುಖ್ಯವಾಗಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಸ್ ಬಂದ್ ಮಾಡುವುದಿಲ್ಲ ಎಂದು ದ.ಕ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಜ್ ಪರ್ತಿಪಾಡಿ ತಿಳಿಸಿದ್ದಾರೆ.
ಬಸ್ ಬಂದ್ ಗೆ ಯಾವುದೇ ಸಂಘಟನೆಗಳು ನಮ್ಮನ್ನು ಕೇಳಿಕೊಂಡಿಲ್ಲ. ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಾರಣದಿಂದ ಬಂದ್ ಮಾಡುವುದು ಕೂಡ ಇಲ್ಲ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ʼಉದಯವಾಣಿʼಗೆ ಪ್ರತಿಕ್ರಿಯಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…