Featured

ಮಾ.22 ರಂದು ಕರ್ನಾಟಕ ಬಂದ್‌ – vishwanews24

ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕಲು ಬಂದ್‌ಗೆ ಕರೆ ಕೊಟ್ಟ ಕನ್ನಡಪರ ಸಂಘಟನೆಗಳು

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕಲು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ  ಕರೆ ನೀಡಿವೆ.

ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಸಂಘಟನೆಗಳ ಸಭೆ ಸೇರಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ ಮಾ.22 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಯಲಿದೆ ವಾಟಾಳ್ ನಾಗರಾಜ್  ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಮಾ.3 ರಂದು ಬೆಳಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ ಹಾಕಲಿದ್ದೇವೆ. ಮಾ.7ಕ್ಕೆ ಬೆಳಗಾವಿ ಚಲೋ ಕೈಗೊಳ್ಳುತ್ತೇವೆ. ಮಾ.11 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಮಾ.14 ರಂದು ಮೈಸೂರು, ಮಂಡ್ಯ, ರಾಮನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸೇರಿದಂತೆ ಇಡೀ ಬೆಳಗಾವಿಯ ಎಲ್ಲಾ ಅಧಿಕಾರಿಗಳ ಬದಲಾವಣೆ ಆಗಬೇಕು. ಎಲ್ಲಾ ಕನ್ನಡ ಅಧಿಕಾರಿಗಳನ್ನ ಹಾಕಬೇಕು. ಎಂಇಎಸ್ ನಿಷೇಧ ಮಾಡಿ ಶಿವಸೇನೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸಾಂಬಾಜಿ ಪ್ರತಿಮೆ ತೆರವು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

2 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

2 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

3 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago