ಬೆಂಗಳೂರು: ಮಾ.3ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, 25 ದಿನ ನಡೆಯುವ ಅಧಿವೇಶನದಲ್ಲಿ ಹಲವು ಬಿಲ್ಗಳು ಮಂಡನೆಯಾಗಲಿವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಧಾನಸಭಾಧ್ಯಕ್ಷ, ಮಾ.5ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ ಎಂದರು. ಕರ್ನಾಟಕ ಲೋಕಾಯುಕ್ತ ತಿದ್ದುಪಡಿ ವಿಧೇಯಕ ಸೇರಿ 6 ವಿಧೇಯಕಗಳ ಮಂಡನೆಯಾಗಲಿದೆ ಎಂದು ತಿಳಿಸಿದರು.
ಸದನದಲ್ಲಿ ಶಾಸಕರು ಸಕ್ರಿಯವಾಗಿ ಪಾಲ್ಗೊಳ್ಳಲು ಅವಕಾಶವಿದೆ. ಹೆಚ್ಚಿನ ಸಮಯಾವಕಾಶ ಇರುವುದರಿಂದ ಸದಸ್ಯರು ಇದನ್ನು ಸದುಪಯೋಗ ಮಾಡಿಕೊಂಡು, ರಚನಾತ್ಮಕ ಚರ್ಚೆಯಲ್ಲಿ ಪಾಲ್ಗೊಳ್ಳಲು ಇದು ಉತ್ತಮ ಅವಕಾಶ ಎಂದರು.
ಮಾ.2 ಮತ್ತು 3ರಂದು ಸದನದಲ್ಲಿ ಸಂಪೂರ್ಣವಾಗಿ ಸಂವಿಧಾನ ಕುರಿತು ಚರ್ಚೆಯಾಗಲಿದೆ. ಆಗ ಯಾವುದೇ ರಾಜಕೀಯ ಚರ್ಚೆಗೆ ಅವಕಾಶ ಇರುವುದಿಲ್ಲ. ಸಂವಿಧಾನದ ಆಶಯ, ಮೂಲ ಉದ್ದೇಶ ಮಾತ್ರ ಈ ವೇದಿಕೆಯಲ್ಲಿ ಚರ್ಚೆಯಾಗಲಿದೆ ಎಂದು ಮಾಹಿತಿ ನೀಡಿದರು.
ಈ ಬಾರಿಯೂ ಮೀಡಿಯಾ ಕ್ಯಾಮರಾಗಳಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ. ಲೋಕಸಭಾ ಮತ್ತು ರಾಜ್ಯಸಭಾ ಮಾದರಿ ಅನುಸರಿಸುವುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಈ ಹಿಂದಿನ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿದೆ. ದೃಶ್ಯ ಮಾಧ್ಯಮದ ಕ್ಯಾಮರಾಗಳಿಗೆ ವಿಧಾನಸಭಾ ಸಭಾಂಗಣದ ಒಳಗೆ ಪ್ರವೇಶವಿಲ್ಲ. ಕಲಾಪದ ನೇರ ಪ್ರಸಾರಕ್ಕೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಕ್ಯಾಮರಾಮನ್ಗಳಿಗೆ ವಿಧಾನಸಭೆಯ ಪಾಸ್ ನೀಡದಂತೆ ಆದೇಶ ನೀಡಲಾಗಿದೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…