Featured

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶ್ರೀ ದ್ವಾರಕಾಮಾಯಿ ಮಠದಲ್ಲಿ ಸಾಯಿ ಈಶ್ವರ್‌ಗುರೂಜಿ ಮಾರ್ಗದರ್ಶನದಲ್ಲಿ 19 ಅಡಿ ಎತ್ತರದ ಕೃಷ್ಣಶಿಲೆಯ ಶ್ರೀ ಮುಖ್ಯಪ್ರಾಣ ದೇವರ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ. 31ರಿಂದ ಎ. 3ರ ವರೆಗೆ ಜರಗಲಿದೆ. ಶ್ರೀಕ್ಷೇತ್ರದ ತಂತ್ರಿ ದೇವದಾಸ್ ತಂತ್ರಿ ಮುಂಬಯಿ ನೇತೃತ್ವದಲ್ಲಿ ಮಾ. 31ರಂದು ಮಧ್ಯಾಹ್ನ ಅನ್ನಪ್ರಸಾದ, ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಎ.1ರಂದು ಬೆಳಗ್ಗೆ 7ರಿಂದ ಗಣಪತಿ ಹೋಮ, ಶ್ರೀ ಮಹಾಗಣಪತಿ, ಅಯ್ಯಪ್ಪ ಸ್ವಾಮಿ, ಸುಬ್ರಹ್ಮಣ್ಯ ಸ್ವಾಮಿ, ದುರ್ಗಾದೇವಿಗೆ ನವಕಾಭಿಷೇಕ, ಮಧ್ಯಾಹ್ನ 12.30ಕ್ಕೆ ಅನ್ನಪ್ರಸಾದ, ಅನಾಥಾಶ್ರಮಗಳ ಮಕ್ಕಳಿಗೆ ಸತ್ಕಾರದ ಬಾಲಭೋಜನ, ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ.

ಇದನ್ನೂ ಓದಿ:

ಎ. 2ರಂದು ಬೆಳಗ್ಗೆ 7ರಿಂದ ಶ್ರೀ ಮುಖ್ಯಪ್ರಾಣ ಶಿಲಾಮೂರ್ತಿ, ನಿತ್ಯಾನಂದ ಸ್ವಾಮಿಯ ಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 12.30ರಿಂದ ಮಹಾ ಅನ್ನಸಂತರ್ಪಣೆ ಜರಗಲಿದೆ. ಬೆಂಗಳೂರು ಸಿದ್ಧಿವಿನಾಯಕ ಶರಭೇಶ್ವರ ಪೀಠದ ಡಾ| ಮಹರ್ಷಿ ಜಯ ಶ್ರೀನಿವಾಸನ್ ಗುರೂಜಿ, ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಮಂಗಳೂರು ಶ್ರೀ ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಿಪೀಠದ ಪ್ರವೀಣ್ ರಾಜ್ ಮಚ್ಚೇಂದ್ರನಾಥ ಉಪಸ್ಥಿತಿಯಲ್ಲಿ ಧರ್ಮ ಸಭೆ ನಡೆಯಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಮುಂಬಯಿ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಇದನ್ನೂ ಓದಿ:

ಎ. 3ರಂದು ಬೆಳಗ್ಗೆ 7ರಿಂದ ಹನುಮಯಾಗ, ಮಧ್ಯಾಹ್ನ 12.30ಕ್ಕೆ ಅನ್ನಪ್ರಸಾದ, ಸಂಜೆ 6ರಿಂದ ಶ್ರೀ ಕಾಲಭೈರವ ಸ್ವಾಮಿ ಬಲಿ ತರ್ಪಣ ಜರಗಲಿದೆ ಎಂದು ಶ್ರೀ ಮುಖ್ಯಪ್ರಾಣ ಪ್ರತಿಷ್ಠಾಪನ ಸಮಿತಿ, ಶ್ರೀ ಸನಾತನ ಸೇವಾದಳ, ಶ್ರೀಕ್ಷೇತ್ರ ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

23 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago