Featured

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶ್ರೀ ದ್ವಾರಕಾಮಾಯಿ ಮಠದಲ್ಲಿ ಸಾಯಿ ಈಶ್ವರ್‌ಗುರೂಜಿ ಮಾರ್ಗದರ್ಶನದಲ್ಲಿ 19 ಅಡಿ ಎತ್ತರದ ಕೃಷ್ಣಶಿಲೆಯ ಶ್ರೀ ಮುಖ್ಯಪ್ರಾಣ ದೇವರ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ. 31ರಿಂದ ಎ. 3ರ ವರೆಗೆ ಜರಗಲಿದೆ. ಶ್ರೀಕ್ಷೇತ್ರದ ತಂತ್ರಿ ದೇವದಾಸ್ ತಂತ್ರಿ ಮುಂಬಯಿ ನೇತೃತ್ವದಲ್ಲಿ ಮಾ. 31ರಂದು ಮಧ್ಯಾಹ್ನ ಅನ್ನಪ್ರಸಾದ, ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಎ.1ರಂದು ಬೆಳಗ್ಗೆ 7ರಿಂದ ಗಣಪತಿ ಹೋಮ, ಶ್ರೀ ಮಹಾಗಣಪತಿ, ಅಯ್ಯಪ್ಪ ಸ್ವಾಮಿ, ಸುಬ್ರಹ್ಮಣ್ಯ ಸ್ವಾಮಿ, ದುರ್ಗಾದೇವಿಗೆ ನವಕಾಭಿಷೇಕ, ಮಧ್ಯಾಹ್ನ 12.30ಕ್ಕೆ ಅನ್ನಪ್ರಸಾದ, ಅನಾಥಾಶ್ರಮಗಳ ಮಕ್ಕಳಿಗೆ ಸತ್ಕಾರದ ಬಾಲಭೋಜನ, ಸಂಜೆ 6ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ.

ಇದನ್ನೂ ಓದಿ:

ಎ. 2ರಂದು ಬೆಳಗ್ಗೆ 7ರಿಂದ ಶ್ರೀ ಮುಖ್ಯಪ್ರಾಣ ಶಿಲಾಮೂರ್ತಿ, ನಿತ್ಯಾನಂದ ಸ್ವಾಮಿಯ ಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 12.30ರಿಂದ ಮಹಾ ಅನ್ನಸಂತರ್ಪಣೆ ಜರಗಲಿದೆ. ಬೆಂಗಳೂರು ಸಿದ್ಧಿವಿನಾಯಕ ಶರಭೇಶ್ವರ ಪೀಠದ ಡಾ| ಮಹರ್ಷಿ ಜಯ ಶ್ರೀನಿವಾಸನ್ ಗುರೂಜಿ, ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಮಂಗಳೂರು ಶ್ರೀ ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಿಪೀಠದ ಪ್ರವೀಣ್ ರಾಜ್ ಮಚ್ಚೇಂದ್ರನಾಥ ಉಪಸ್ಥಿತಿಯಲ್ಲಿ ಧರ್ಮ ಸಭೆ ನಡೆಯಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಮುಂಬಯಿ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಇದನ್ನೂ ಓದಿ:

ಎ. 3ರಂದು ಬೆಳಗ್ಗೆ 7ರಿಂದ ಹನುಮಯಾಗ, ಮಧ್ಯಾಹ್ನ 12.30ಕ್ಕೆ ಅನ್ನಪ್ರಸಾದ, ಸಂಜೆ 6ರಿಂದ ಶ್ರೀ ಕಾಲಭೈರವ ಸ್ವಾಮಿ ಬಲಿ ತರ್ಪಣ ಜರಗಲಿದೆ ಎಂದು ಶ್ರೀ ಮುಖ್ಯಪ್ರಾಣ ಪ್ರತಿಷ್ಠಾಪನ ಸಮಿತಿ, ಶ್ರೀ ಸನಾತನ ಸೇವಾದಳ, ಶ್ರೀಕ್ಷೇತ್ರ ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.

Vishwa News 24

Recent Posts

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

17 minutes ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

27 minutes ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

36 minutes ago

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

19 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

20 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

20 hours ago