Featured

ಮಿಚಾಂಗ್ ಚಂಡಮಾರುತ ಅಬ್ಬರ – ತಮಿಳುನಾಡಿನಲ್ಲಿ ಜಲ ಪ್ರಳಯ ; ಮುಳುಗಿದ ಚೆನ್ನೈ – vishwanews24

ಮಿಚಾಂಗ್ ಚಂಡಮಾರುತ ಅಬ್ಬರ – ತಮಿಳುನಾಡಿನಲ್ಲಿ ಜಲ ಪ್ರಳಯ ; ಮುಳುಗಿದ ಚೆನ್ನೈ

ಚೆನ್ನೈ : ಮಿಚಾಂಗ್ ಚಂಡಮಾರುತದ ತಮಿಳುನಾಡಿನಲ್ಲಿ ಜಲ ಪ್ರಳಯವನ್ನೇ ಸೃಷ್ಠಿಸಿದೆ. ಅದರಲ್ಲೂ ಚೆನ್ನೈ ಮಳೆಯಿಂದಾಗಿ ಸಂಪೂರ್ಣ ಮುಳುಗಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರೈಲು ವಿಮಾನ ಸೇವೆಗಳು ಸಂಪೂರ್ಣ ನಿಂತು ಹೋಗಿವೆ. ಇಂದು ಚೆನ್ನೈನಲ್ಲಿ ಸುರಿದ ಮಳೆಯು 2015ರ ಪ್ರವಾಹದ ನಂತರ ಸುರಿದ “ಅ ತಿದೊಡ್ಡ ಮಳೆ”ಯಾಗಿದೆ ಎಂದು ಹೇಳಲಾಗುತ್ತಿದೆ.

ರಾಜಧಾನಿ ಚೆನ್ನೈ ಮತ್ತು ನೆರೆಯ ಮೂರು ಜಿಲ್ಲೆಗಳಲ್ಲಿ ಮಿಚಾಂಗ್ ತೀವ್ರ ಪರಿಣಾಮ ಬೀರಿದೆ. ಕಳೆದೆರಡು ದಿನದಲ್ಲಿ 40 ಸೆಂ.ಮೀ ಮಳೆ ಆಗಿದೆ. ಚೆನ್ನೈ ವಿಮಾನ ನಿಲ್ದಾಣ, ಪಾಲಿಕೆ ಆವರಣ, ನಗರದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಜನಜೀವನ ನಿಯಂತ್ರಣ ತಪ್ಪಿದೆ. ಇನ್ನು ಮಳೆಗೆ ಮಹಿಳೆ ಸೇರಿ ಐವರು ಸಾವಿಗೀಡಾಗಿದ್ದಾರೆ. ಈ ಪೈಕಿ ಇಬ್ಬರು ವಿದ್ಯುತ್ ತಂತಿ ಸಂಪರ್ಕದಿಂದ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಚೆನ್ನೈನ ಪೆರುಂಗುಡಿಯಲ್ಲಿ ಗರಿಷ್ಠ ಅಂದರೆ 29 ಸೆಂ.ಮೀ ಮಳೆ ಪ್ರಮಾಣ ದಾಖಲಾಗಿದ್ದರೆ, ತಿರುವಲ್ಲೂರು ಜಿಲ್ಲೆಯ ಅವಡಿಯಲ್ಲಿ 28 ಸೆಂ.ಮೀ., ಚೆಂಗಲ್‌ಪೇಟ್‌ನ ಮಾಮಲ್ಲಪುರಂನಲ್ಲಿ 22 ಸೆಂ.ಮೀ ಮಳೆ ಸುರಿದಿರುವುದು ದಾಖಲಾಗಿದೆ.

ರಾಜಧಾನಿಯಲ್ಲಿ ಲಕ್ಷಾಂತರ ನಿವಾಸಿಗಳು ಭಾನುವಾರದಿಂದ ಸೋಮವಾರ ಸಂಜೆಯವರೆಗೂ ಮನೆಗಳಲ್ಲಿಯೇ ಬಂದಿಯಾಗಿದ್ದರು. ಈ ಹಿಂದೆ 2015ರಲ್ಲಿ ಮೂಡಿದ್ದ ಮುಳುಗಡೆ ಭೀತಿ ಮತ್ತೆ ನಾಗರಿಕರನ್ನು ಕಾಡುತ್ತಿದೆ. ಹೀಗಾಗಿ, ಅಗತ್ಯ ವಸ್ತುಗಳು, ಕುಡಿಯುವ ನೀರಿನ ಸಂಗ್ರಹಕ್ಕೆ ಜನರು ಒತ್ತು ನೀಡಿದ್ದು, ಇವುಗಳಿಗೆ ಬೇಡಿಕೆ ಹೆಚ್ಚಿದೆ. ಸೋಮವಾರ ತಡರಾತ್ರಿಯವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದು, ಸಹಜ ಸ್ಥಿತಿಗೆ ಮರಳಲು ಸ್ವಲ್ಪ ಸಮಯ ಹಿಡಿಯಲಿದೆ.

ಚೆನ್ನೈನ ವಿಮಾನ ನಿಲ್ದಾಣ ಸೇರಿದಂತೆ ಬಹುತೇಕ ಭಾಗಗಳು ಜಲಾವೃತವಾಗಿವೆ. ರೈಲು-ವಿಮಾನ ಸಂಚಾರ ಸಹ ಸ್ಥಗಿತಗೊಂಡಿದೆ. ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

17 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

17 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

18 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

18 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

19 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago