Featured

ಮಿಡ್‌ನೈಟ್ ಚಾಟ್ ಆ್ಯಪ್‌ಗಳ ಮೂಲಕ ಆನ್‌ಲೈನ್ ಬ್ಲ್ಯಾಕ್‌ಮೇಲ್ : ಯುವಜನತೆಗೆ ಮಂಗಳೂರು ಪೊಲೀಸರ ಎಚ್ಚರಿಕೆ – vishwanews24

ಮಿಡ್‌ನೈಟ್ ಚಾಟ್ ಆ್ಯಪ್‌ಗಳ ಮೂಲಕ ಆನ್‌ಲೈನ್ ಬ್ಲ್ಯಾಕ್‌ಮೇಲ್ : ಯುವಜನತೆಗೆ ಮಂಗಳೂರು ಪೊಲೀಸರ ಎಚ್ಚರಿಕೆ

ಮಂಗಳೂರು : ಆನ್‌ಲೈನ್ ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಗಾಗಿ ಹೆಚ್ಚಾಗಿ ಬಳಕೆಯಾಗುತ್ತಿರುವ ‘ಮಿಡ್‌ನೈಟ್ ಚಾಟ್’ ಆ್ಯಪ್‌ಗಳ ಬಲೆಗೆ ಬೀಳದಂತೆ ಮಂಗಳೂರು ನಗರ ಪೊಲೀಸರು ಯುವಜನತೆಗೆ ಎಚ್ಚರಿಕೆ ನೀಡಿದ್ದಾರೆ.

ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಕ ಮಹಿಳೆಯರ ಅಥವಾ ಎಐ ಮೂಲಕ ಸೃಷ್ಟಿಸಿದ ಪ್ರೊಫೈಲ್‌ಗಳ ಮೂಲಕ ಸ್ನೇಹದ ಆಮಿಷವೊಡ್ಡಿ ಯುವಕರನ್ನು ಸೆಳೆಯಲಾಗುತ್ತಿದೆ. ಹೀಗೆ ಯುವಕರ ನಂಬಿಕೆ ಗಳಿಸಿ, ನಂತರ ಅವರ ವೈಯಕ್ತಿಕ ವಿವರಗಳು ಮತ್ತು ಖಾಸಗಿ ಕ್ಷಣಗಳನ್ನು ಹಂಚಿಕೊಳ್ಳುವಂತೆ ಪ್ರಚೋದಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಭಾಷಣೆಗಳು ಕ್ರಮೇಣ ವಿಡಿಯೋ ಅಥವಾ ವಾಯ್ಸ್ ಕಾಲ್‌ಗಳಿಗೆ ತಿರುಗುತ್ತವೆ. ಈ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಸಂತ್ರಸ್ತರ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿಕೊಳ್ಳಲಾಗುತ್ತದೆ. ನಂತರ, ದೊಡ್ಡ ಮೊತ್ತದ ಹಣವನ್ನು ನೀಡದಿದ್ದರೆ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಲಾಗುತ್ತದೆ. ಮಾನಹಾನಿಯ ಭೀತಿ ಮತ್ತು ಮುಜುಗರದಿಂದಾಗಿ ಈಗಾಗಲೇ ಹಲವಾರು ಯುವಕರು ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಸಾಮಾಜಕ್ಕೆ ಹೆದರಿ ಅನೇಕ ಪ್ರಕರಣಗಳು ಇಂದಿಗೂ ದಾಖಲಾಗದೆ ಉಳಿದಿವೆ ಎಂದು ಪೊಲೀಸರ ಮಾಹಿತಿಯ ನೀಡಿದ್ದಾರೆ.

ಮಂಗಳೂರು, ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಹುಬ್ಬಳ್ಳಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂತಹ ಘಟನೆಗಳು ವರದಿಯಾಗಿವೆ. ಡೇಟಿಂಗ್ ಮತ್ತು ಹೂಡಿಕೆಯ ಆಮಿಷವೊಡ್ಡಿ ಆರ್ಥಿಕ ವಂಚನೆ ಎಸಗಲಾಗುತ್ತಿದೆ. ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಯುವಜನತೆ ಜಾಗರೂಕರಾಗಿರಬೇಕು. ಅಪರಿಚಿತರೊಂದಿಗೆ ಆ್ಯಪ್‌ಗಳ ಮೂಲಕ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಸಂಪರ್ಕ ಬೆಳೆಸಬೇಡಿ. ಇಂತಹ ವಂಚನೆಗಳ ಹಿಂದೆ ಸಂಘಟಿತ ಜಾಲಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago