ಮಂಗಳೂರು : ಆನ್ಲೈನ್ ಬ್ಲ್ಯಾಕ್ಮೇಲ್ ಮತ್ತು ಸುಲಿಗೆಗಾಗಿ ಹೆಚ್ಚಾಗಿ ಬಳಕೆಯಾಗುತ್ತಿರುವ ‘ಮಿಡ್ನೈಟ್ ಚಾಟ್’ ಆ್ಯಪ್ಗಳ ಬಲೆಗೆ ಬೀಳದಂತೆ ಮಂಗಳೂರು ನಗರ ಪೊಲೀಸರು ಯುವಜನತೆಗೆ ಎಚ್ಚರಿಕೆ ನೀಡಿದ್ದಾರೆ.
ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಕ ಮಹಿಳೆಯರ ಅಥವಾ ಎಐ ಮೂಲಕ ಸೃಷ್ಟಿಸಿದ ಪ್ರೊಫೈಲ್ಗಳ ಮೂಲಕ ಸ್ನೇಹದ ಆಮಿಷವೊಡ್ಡಿ ಯುವಕರನ್ನು ಸೆಳೆಯಲಾಗುತ್ತಿದೆ. ಹೀಗೆ ಯುವಕರ ನಂಬಿಕೆ ಗಳಿಸಿ, ನಂತರ ಅವರ ವೈಯಕ್ತಿಕ ವಿವರಗಳು ಮತ್ತು ಖಾಸಗಿ ಕ್ಷಣಗಳನ್ನು ಹಂಚಿಕೊಳ್ಳುವಂತೆ ಪ್ರಚೋದಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಭಾಷಣೆಗಳು ಕ್ರಮೇಣ ವಿಡಿಯೋ ಅಥವಾ ವಾಯ್ಸ್ ಕಾಲ್ಗಳಿಗೆ ತಿರುಗುತ್ತವೆ. ಈ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಸಂತ್ರಸ್ತರ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿಕೊಳ್ಳಲಾಗುತ್ತದೆ. ನಂತರ, ದೊಡ್ಡ ಮೊತ್ತದ ಹಣವನ್ನು ನೀಡದಿದ್ದರೆ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಲಾಗುತ್ತದೆ. ಮಾನಹಾನಿಯ ಭೀತಿ ಮತ್ತು ಮುಜುಗರದಿಂದಾಗಿ ಈಗಾಗಲೇ ಹಲವಾರು ಯುವಕರು ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಸಾಮಾಜಕ್ಕೆ ಹೆದರಿ ಅನೇಕ ಪ್ರಕರಣಗಳು ಇಂದಿಗೂ ದಾಖಲಾಗದೆ ಉಳಿದಿವೆ ಎಂದು ಪೊಲೀಸರ ಮಾಹಿತಿಯ ನೀಡಿದ್ದಾರೆ.
ಮಂಗಳೂರು, ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಹುಬ್ಬಳ್ಳಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂತಹ ಘಟನೆಗಳು ವರದಿಯಾಗಿವೆ. ಡೇಟಿಂಗ್ ಮತ್ತು ಹೂಡಿಕೆಯ ಆಮಿಷವೊಡ್ಡಿ ಆರ್ಥಿಕ ವಂಚನೆ ಎಸಗಲಾಗುತ್ತಿದೆ. ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಯುವಜನತೆ ಜಾಗರೂಕರಾಗಿರಬೇಕು. ಅಪರಿಚಿತರೊಂದಿಗೆ ಆ್ಯಪ್ಗಳ ಮೂಲಕ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಸಂಪರ್ಕ ಬೆಳೆಸಬೇಡಿ. ಇಂತಹ ವಂಚನೆಗಳ ಹಿಂದೆ ಸಂಘಟಿತ ಜಾಲಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…