ಬೆಂಗಳೂರು: ಮಂಗಳೂರಿನ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಿಣಿ ಮಿಣಿ ಪೌಡರ್ ಉಲ್ಲೇಖ ಮಾಡಿದ್ದ ವಿಡಿಯೋವನ್ನು ಟ್ರೋಲ್ ಮಾಡಿ ವೈರಲ್ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಿಣಿ ಮಿಣಿ ಪೌಡರ್ ಹೇಳಿಕೆಯನ್ನು ಬಿಜೆಪಿ ಕಾರ್ಯಕರ್ತರೇ ಟ್ರೋಲ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮಂಗಳೂರು ಬಾಂಬ್ ಪ್ರಕರಣದಲ್ಲಿ ಮಾಧ್ಯಮಗಳ ವರದಿ ಆಧರಿಸಿ ಪಟಾಕಿ ಪೌಡರ್ ಕುರಿತು ನಾನು ಹೇಳಿಕೆ ನೀಡಿದ್ದೆ. ಈ ಪ್ರಕರಣದಲ್ಲಿ ಕೆಲವು ಹಿರಿಯ ಅಧಿಕಾರಿಗಳೇ ಮಾಧ್ಯಮಗಳ ದಾರಿ ತಪ್ಪಿಸಿದರು. ಸರ್ಕಾರ ಎಲ್ಲಿ ಬಿಗಿ ಮಾಡಬೇಕಿತ್ತೋ ಅಲ್ಲಿ ಮಾಡಲಿಲ್ಲ. ಪ್ರಕರಣದಲ್ಲಿ ಸರ್ಕಾರ, ಪೊಲೀಸರ ಲೋಪ ಮುಚ್ಚಿಕೊಳ್ಳಲು ಇಂತಹದ್ದಕ್ಕೆ ಪ್ರಚಾರ ನೀಡಲಾಯಿತು. ನಾನು ಕಥೆ ಕಟ್ಟಿಲ್ಲ. ಮಾಧ್ಯಮ ವರದಿ ಆಧರಿಸಿ ಹೇಳಿಕೆ ಕೊಟ್ಟಿದ್ದೇನೆ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದರು.
ಮಿಣಿ ಮಿಣಿ ಪೌಡರ್ ಹೇಳಿಕೆಯನ್ನು ಟ್ರೋಲ್ ಮಾಡಿರುವುದು ವಿಕೃತ ಮನೋಭಾವ. ಈ ಮೂಲಕ ಅವರಲ್ಲಿರುವ ಆಲೋಚನೆಗಳು ವ್ಯಕ್ತವಾಗುತ್ತಿದೆ. ನಾನು ಜೀವನದಲ್ಲಿ ತಪ್ಪು ಮಾಡಿಲ್ಲ. ತಪ್ಪು ಮಾಡಿದರೆ ಮುಕ್ತವಾಗಿ ಹೇಳುತ್ತೇನೆ. ನನ್ನ ಬಗ್ಗೆ ಕೀಳಾಗಿ ಟ್ರೋಲ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಇದು ಬಿಜೆಪಿ ಸಂಸ್ಕೃತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೊಡ್ಡ ಕಂಟೈನರ್ನಲ್ಲಿ ಬಾಂಬ್ ಇದೆ. ಸಾವಿರಾರು ಜನ ಸಾಯುತ್ತಾರೆ ಎಂದಿದ್ದರು. ಒಂದು ಸಮಾಜದ ಬಗ್ಗೆ ದೋಷ ತೋರಿಸಬೇಕು ಎನ್ನುವುದು ಅವರ ಮನಸ್ಸಿನಲ್ಲಿ ಇತ್ತು. ಈಗ ತಾವೇ ಎಕ್ಸ್ಪೋಸ್ ಆಗಿದ್ದಾರೆ. ಅದನ್ನು ಮುಚ್ಚಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಈ ಕಥೆಗಳನ್ನು ಕಟ್ಟುತ್ತಿದ್ದಾರೆ ಎಂದು ದೂರಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…