ಮಂಗಳೂರು,: ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಟಿಕೆಟ್ ಕೈತಪ್ಪಿರುವುದರಿಂದ ಬೇಸತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.
ಮಂಗಳೂರಿನ ಹೋಟೆಲ್ವೊಂದರಲ್ಲಿ ಮಾತನಾಡಿದ ಯುವ ಕಾಂಗ್ರೆಸ್ನ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಗುಡ್ಡೆಗುತ್ಲು, ಮೂರು ವರ್ಷಗಳಿಂದ ಹಿಂದೆ ಮೂಡುಬಿದಿರೆ-ಮುಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಪ್ರಸ್ತಾಪವಾಗಿತ್ತು. ಅದರಂತೆ ಟೆಕೆಟ್ ಆಕಾಂಕ್ಷಿಯಾಗಿದ್ದ ಮಿಥುನ್ ರೈ ಕಳೆದ ಮೂರು ವರ್ಷಗಳಿಂದ ಮುಲ್ಕಿಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಆದರೆ ಇದೀಗ ಟಿಕೆಟ್ ಕೈತಪ್ಪುವ ಮೂಲಕ ಅವರಿಗೆ ಅನ್ಯಾಯವಾಗಿದೆ. ಇದನ್ನು ಪ್ರತಿಭಟಿಸಿ ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ ಎಂದರು.
ಸದ್ಯ ಮಿಥುನ್ ರೈಯವರು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ. ಆದ್ದರಿಂದ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸುವವರೆಗೆ ತಟಸ್ಥ ನೀತಿ ಅನುಸರಿಸಲು ನಿರ್ಧರಿಸಿದ್ದೇವೆ ಎಂದು ಕಿರಣ್ ಕುಮಾರ್ ತಿಳಿಸಿದರು.
ಯುವ ಕಾಂಗ್ರೆಸ್ ಮುಖಂಡರಾದ ಸುಹೈಲ್ ಕಂದಕ್, ಮೆಲ್ವಿನ್ ರೇಗೊ, ಗಿರೀಶ್ ಆಳ್ವ, ಮುಹಮ್ಮದ್ ತೌಸೀಫ್, ಅಭಿನಂದನ್, ಪ್ರಶಾಂತ್ ಕುಲಾಲ್, ಸಿದ್ದೀಕ್, ಪ್ರಸಾದ್ ಮಲ್ಲಿ, ವರುಣ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…