Featured

ಮಿಥುನ್ ರೈ ಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ : ಡಿ.ಕೆ.ಶಿವಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯನಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ .ರೈಯನ್ನು ಗೆಲ್ಲಿಸಿ, ನಾವೆಲ್ಲರೂ ಸೇರಿ ಸುಳ್ಯ ಪ್ರದೇಶವನ್ನು ಅಭಿವೃದ್ಧಿ ಮಾಡುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಅವರು ಸುಳ್ಯ ತಾಲೂಕಿನ ಗುತ್ತಿಗಾರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

ಸುಳ್ಯ ಪ್ರದೇಶದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎಂಬುದು ತನ್ನ ಗಮನಕ್ಕೆ ಬಂದಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸು ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡೋಣ. ನಾವೆಲ್ಲರು ಇಲ್ಲೇ ಸೇರಿ ಸುಳ್ಯದ ಅಭಿವೃದ್ಧಿಯ ಕುರಿತು ಚರ್ಚಿಸಿ ಎಲ್ಲರ ಅಭಿಪ್ರಾಯ, ಬೇಡಿಕೆಗಳನ್ನು ಪಡೆದು ಅಭಿವೃದ್ಧಿಯನ್ನು ಮಾಡೋಣ ಎಂದು ಶಿವಕುಮಾರ್ ಹೇಳಿದರು.

ಸುಳ್ಯದಲ್ಲಿ ಪಕ್ಷವನ್ನು ಇನ್ನಷ್ಟು ಸಂಘಟಿಸಲು ತಾನೇ ಖುದ್ದಾಗಿ ನೇತೃತ್ವ ವಹಿಸುವುದಾಗಿ ಹೇಳಿದ ಡಿ.ಕೆ.ಶಿವಕುಮಾರ್ ಅವರು, ತನ್ನ ಬೂತಿನಲ್ಲಿ ಯಾರೂ ಹೆಚ್ಚು ಲೀಡ್ ತಂದು ಕೊಡುತ್ತಾನೊ ಅವರನೇ ನಿಜವಾದ ಲೀಡರ್ ಆಗಿರುತ್ತಾನೆ ಎಂದು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಕಿವಿ ಮಾತು ಹೇಳಿದರು.

ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ತಮ್ಮದು ಸರ್ವಧರ್ಮಗಳನ್ನು ಗೌರವಿಸುವ, ಸಹಬಾಳ್ವೆಯ ನೈಜ ಹಿಂದೂತ್ವವಾಗಿದೆ. ನಮ್ಮಲ್ಲಿ ಪರಸ್ಪರ ಮನುಷ್ಯರಲ್ಲಿ ದ್ವೇಷ ಮಾಡುವುದಕ್ಕೆ ಅವಕಾಶವೇ ಇಲ್ಲ. ಮಾತ್ರವಲ್ಲದೆ, ಧರ್ಮವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ದುರುಪಯೋಗ ಮಾಡುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿಗಳಾದ ವೆಂಕಪ್ಪ ಗೌಡ, ಭರತ್ ಮುಂಡೋಡಿ, ಜೆಡಿಎಸ್ ಮುಖಂಡರಾದ ಎಂ.ಬಿ.ಸದಾಶಿವ, ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಜಯಪ್ರಕಾಶ್ ರೈ, ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.

https://www.facebook.com/VishwaNews24/videos/2090418227744100/?t=29
Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

15 minutes ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

28 minutes ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

38 minutes ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

54 minutes ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

1 hour ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

1 hour ago