ನೆಲ್ಯಾಡಿ: ‘ಲೋಕಸಭೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಒಂದು ಬಾರಿಯೂ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಧ್ವನಿಯನ್ನು ಎತ್ತದ, ಬಿಜೆಪಿ ಅಭ್ಯರ್ಥಿಯ ಬದಲು, ಕಾಂಗ್ರೆಸ್ ಪಕ್ಷದ ವಿದ್ಯಾವಂತ ಯುವ ಅಭ್ಯರ್ಥಿ ಮಿಥುನ್ ರೈ ಸುಶಿಕ್ಷಿತರಾಗಿದ್ದು ಇವರನ್ನು ಪ್ರಚಂಡ ಬಹುಮತದಿಂದ ಜಿಲ್ಲೆಯ ಪ್ರಜ್ಞಾವಂತ ಮತದಾರರು ಗೆಲ್ಲಿಸಿಕೊಡಬೇಕು’ ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು.
ಸೋಮವಾರ ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಮಿಥುನ್ ರೈ ಸಾಮಾಜಿಕ, ಜನಪರ ಕಾಳಜಿ ಇರುವ ಯುವಕನಾಗಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು’ ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ‘ಮಿಲಿಟರಿ ನಡೆಸಿದ ಕಾರ್ಯಾಚರಣೆ ಪಕ್ಷದ ಲಾಭಕ್ಕಾಗಿ ಬಳಸಲು ಮುಂದಾದ ಬಿಜೆಪಿ ಈ ರೀತಿಯಾಗಿ ದೇಶ ಪ್ರೇಮವನ್ನು ತೋರಿಸುತ್ತದೆ, ಆದರೆ ದೇಶಕ್ಕಾಗಿ ಪ್ರಾಣ ತೆತ್ತ ನಾಯಕರು ಇದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ’ ಎಂದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮತ ಯಾಚನೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿದರು.
ಕರ್ನಾಟಕ ರಾಜ್ಯ ಮಲೆಯಾಳಿ ಕ್ರಿಶ್ಚಿಯನ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಎ.ಸಿ. ಜಯರಾಜ್, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವೀಕ್ಷಕ ನವೀನ್ ಚಂದ್ರ ಶೆಟ್ಟಿ ಕಾಪು, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದನ್ ಕಾಮತ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕೊಕ್ಕಡ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಣ್ಣಪ್ಪ ಗೌಡ ಕಾಶಿ, ಕೊಕ್ಕಡ ಯೂತ್ ಕಾಂಗ್ರೆಸ್ನ ಖಲಂದರ್ ಹಳ್ಳಿಂಗೇರಿ, ಜೆಸ್ಟಿನ್ ಕೊಕ್ಕಡ ಇದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…