Featured

ಮಿಥುನ್ ರೈ ಸಾಮಾಜಿಕ, ಜನಪರ ಕಾಳಜಿ ಇರುವ ಯುವಕ : ವಸಂತ ಬಂಗೇರ – Vishwanews24

ನೆಲ್ಯಾಡಿ: ‘ಲೋಕಸಭೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಒಂದು ಬಾರಿಯೂ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಧ್ವನಿಯನ್ನು ಎತ್ತದ, ಬಿಜೆಪಿ ಅಭ್ಯರ್ಥಿಯ ಬದಲು, ಕಾಂಗ್ರೆಸ್ ಪಕ್ಷದ ವಿದ್ಯಾವಂತ ಯುವ ಅಭ್ಯರ್ಥಿ ಮಿಥುನ್ ರೈ ಸುಶಿಕ್ಷಿತರಾಗಿದ್ದು ಇವರನ್ನು ಪ್ರಚಂಡ ಬಹುಮತದಿಂದ ಜಿಲ್ಲೆಯ ಪ್ರಜ್ಞಾವಂತ ಮತದಾರರು ಗೆಲ್ಲಿಸಿಕೊಡಬೇಕು’ ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು.

ಸೋಮವಾರ ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಮಿಥುನ್ ರೈ ಸಾಮಾಜಿಕ, ಜನಪರ ಕಾಳಜಿ ಇರುವ ಯುವಕನಾಗಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು’ ಎಂದರು.

ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ‘ಮಿಲಿಟರಿ ನಡೆಸಿದ ಕಾರ್ಯಾಚರಣೆ ಪಕ್ಷದ ಲಾಭಕ್ಕಾಗಿ ಬಳಸಲು ಮುಂದಾದ ಬಿಜೆಪಿ ಈ ರೀತಿಯಾಗಿ ದೇಶ ಪ್ರೇಮವನ್ನು ತೋರಿಸುತ್ತದೆ, ಆದರೆ ದೇಶಕ್ಕಾಗಿ ಪ್ರಾಣ ತೆತ್ತ ನಾಯಕರು ಇದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ’ ಎಂದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮತ ಯಾಚನೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿದರು.

ಕರ್ನಾಟಕ ರಾಜ್ಯ ಮಲೆಯಾಳಿ ಕ್ರಿಶ್ಚಿಯನ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಎ.ಸಿ. ಜಯರಾಜ್, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವೀಕ್ಷಕ ನವೀನ್ ಚಂದ್ರ ಶೆಟ್ಟಿ ಕಾಪು, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದನ್ ಕಾಮತ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕೊಕ್ಕಡ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಣ್ಣಪ್ಪ ಗೌಡ ಕಾಶಿ, ಕೊಕ್ಕಡ ಯೂತ್ ಕಾಂಗ್ರೆಸ್‌ನ ಖಲಂದರ್ ಹಳ್ಳಿಂಗೇರಿ, ಜೆಸ್ಟಿನ್ ಕೊಕ್ಕಡ ಇದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago