ಉತ್ತರಕನ್ನಡ: ಮಿದುಳು ಜ್ವರದಿಂದ ಬಳಲುತ್ತಿರುವ ತಮ್ಮ ಮಗನನ್ನು ಕಾಪಾಡಲು ದಂಪತಿಗಳು ಇದೀಗ ದೇವರ ಮೊರೆ ಹೋಗಿದ್ದು, ನಂದಗಡ ಗ್ರಾಮದ ಹೊರವಲಯದ ಬೆಟ್ಟದ ಮೇಲಿರುವ ಏಸುಕ್ರಿಸ್ತನ ಶಿಲುಬೆ ಮುಂದೆ ಮಂಗಳವಾರ ಬಾಲಕನನ್ನು ಮಲಗಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ನಂದಗಡದ ದಂಪತಿಗಳ 8 ವರ್ಷದ ಮಗನಿಗೆ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ವೈದ್ಯರು ಕೈಚೆಲ್ಲಿದ್ದು, ಇದೀಗ ದೇವರ ಮೊರೆ ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ನಿವಾಸಿಗಳಾದ ಕೃಷ್ಣ ಸುತ್ರಾವೆ ಹಾಗೂ ಅಂಬಾ ದಂಪತಿಯ 8 ವರ್ಷದ ಪುತ್ರ ಶೈಲೇಶ ಮಿದುಳು ಜ್ವರದಿಂದಾಗಿ ಪಾರ್ಶ್ವವಾಯು ಪೀಡಿತನಾಗಿದ್ದಾನೆ. ಹಲವು ಆಸ್ಪತ್ರೆಗಳಿಗೆ ಹೋಗಿ, ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಲಕ್ಷಾಂತರ ಹಣ ವ್ಯಯಿಸಿದ್ದಾರೆ. ಆದರೆ, ಇತ್ತೀಚೆಗೆ ಬಾಲಕನ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ವೈದ್ಯರೂ ಕೈಚೆಲ್ಲಿದ್ದಾರೆ.
ಇದರಿಂದ ದಿಕ್ಕು ತೋಚದಾದ ದಂಪತಿ ಏಸುವಿನ ಮೊರೆಹೋಗಿದ್ದಾಗಿ ತಿಳಿಸಿದರು. ನಂದಗಡ ಗ್ರಾಮದ ಹೊರವಲಯದ ಬೆಟ್ಟದ ಮೇಲಿರುವ ಏಸು ಕ್ರಿಸ್ತನ ಶಿಲುಬೆಯ ಮುಂದೆ ಪ್ರಾರ್ಥಿಸಿದರೆ ಮಗ ಬದುಕುತ್ತಾನೆ ಎಂದು ಮಿತ್ರರು ಹೇಳಿದ್ದರಿಂದ, ಆ ಮಾತು ನಂಬಿ ದಂಪತಿ ಇಲ್ಲಿಗೆ ಬಂದರು. ಶಿಲುಬೆ ಮುಂದೆ ಮಗನನ್ನು ಮಲಗಿಸಿ ದೂರದಲ್ಲಿ ಕುಳಿತು ಪ್ರಾರ್ಥಿಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…