Featured

ಮಿಸೆಸ್​ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ – Vishwanews24

ಮಿಸೆಸ್​ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಪ್ಡೇಟ್‍ಗಳ ಬಗ್ಗೆ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುವ ಮುದ್ದು ಬೊಂಬೆ ನಿವೇದಿತಾ ಗೌಡ ಈಗ ಮಿಸೆಸ್ ಇಂಡಿಯಾ ಆಗಿದ್ದಾರೆ. ಮಿಸೆಸ್ ಇಂಡಿಯಾ ಆಗಲು ಅವರು ಮಾಡುತ್ತಿದ್ದ ತಯಾರಿಗಳ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದ ನಿವೇದಿತಾ ಗೆಲುವಿನ ಕಿರೀಟವನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಆಗಿರುವ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ ನಿವೇದಿತಾ ತಂಡ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ, ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಅವರು ನಮ್ರತೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಎಲ್ಲರಿಗೂ ಗೊತ್ತಿರುವಂತೆ ನಿವೇದಿತಾ ಗೌಡ ಒಂದು ಯೂಟ್ಯೂಬ್ ಚಾನೆಲ್ ಕೂಡ ಹೊಂದಿದ್ದಾರೆ. ಅದರಲ್ಲಿ ಅವರು ಹೋಮ್ ಟೂರ್, ಬಟ್ಟೆ ಕಲೆಕ್ಷನ್ ಹಾಗೂ ಬ್ಯಾಗ್ ಕಲೆಕ್ಷನ್ ಸೇರಿದಂತೆ ಹಲವಾರು ರೀತಿಯ ವೀಡಿಯೋಗಳನ್ನು ಮಾಡಿ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಈ ಬಾರಿ ಮಿಸೆಸ್ ಇಂಡಿಯಾಗೆ ಅವರು ಹೇಗೆಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ, ಅವರ ಡಯೆಟ್ ಏನು ಎಂಬ ಬಗ್ಗೆ ಹೇಳಿದ್ದರು.

https://www.instagram.com/p/CgRS5kDP5QW/?utm_source=ig_embed&ig_rid=85525f95-16ba-42b4-a3a7-3ba6b9b7cf84

ಅಲ್ಲದೇ, ಈ ವೀಡಿಯೋದಲ್ಲಿ ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಏನು ಮಾಡುತ್ತಾರೆ ಎಂಬುದನ್ನ ಸಹ ತೋರಿಸಿದ್ದಾರೆ. ಹೇಗೆ ನೈಸರ್ಗಿಕವಾಗಿ ಮುಖದ ಅಂದವನ್ನು ಹೆಚ್ಚು ಮಾಡಿಕೊಳ್ಳಬಹುದು ಎಂಬುದನ್ನ ತೋರಿಸಿದ್ದಾರೆ. ಫೇಸ್ ಮಸಾಜ್‍ಗಳನ್ನು ಹೇಳಿಕೊಟ್ಟಿದ್ದು, ಯಾವುದರಿಂದ ಏನು ಲಾಭ ಎಂಬುದನ್ನ ಸಹ ತಿಳಿಸಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago