ಉಡುಪಿ: ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿ ನಡೆದ ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಮಹಿಳೆ ಮಿಸೆಸ್ ಯೂನಿವರ್ಸಲ್ಗೆ ಪ್ರವೇಶ ಪಡೆದಿದ್ದಾರೆ.
ಉಡುಪಿ ತೆಂಕಪೇಟೆ ನಿವಾಸಿಗಳಾದ ಅರುಣ್ ಶೆಣೈ, ಅರ್ಚನ ಶೆಣೈ ದಂಪತಿಯ ಪುತ್ರಿ ಡಾ. ಪದ್ಮ ಗಡಿಯಾರ್ ಬ್ರಿಸ್ಬೇನ್ನಲ್ಲಿ 2018 ಅಕ್ಟೋಬರ್ ತಿಂಗಳಲ್ಲಿ ಯು.ಎಸ್ ಮೂಲದ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸಸ್ ಸೌತ್ ಇಂಡಿಯ ಯೂನಿವರ್ಸಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ 35 ವರ್ಷದ ಡಾ.ಪದ್ಮ ಆಸ್ಟ್ರೇಲಿಯದಲ್ಲಿ ದಂತ ವೈದ್ಯೆಯಾಗಿ ಕಾರ್ಯನಿರ್ವಹಿಸುತಿದ್ದಾರೆ.
ಪತಿ ಡಾ.ಸನಯ್ ಗಡಿಯಾರ್ ವೈದ್ಯರಾಗಿದ್ದು, ಸಮಾ (7) ಮಗಳು, ಶಯನ್ (4) ಮಗ, ಇಬ್ಬರು ಮಕ್ಕಳೊಂದಿಗೆ ಆಸ್ಟ್ರೇಲಿಯದಲ್ಲಿ ನೆಲೆಸಿದ್ದಾರೆ. ಪ್ರಾಥಮಿಕ ಶಿಕ್ಷಣ ಇಂದ್ರಾಳಿ ಶಾಲೆಯಲ್ಲಿ, ಪಿಯುಸಿ ಎಂಜಿಎಂ ಕಾಲೇಜು, ದಂತ ವೈದ್ಯಕೀಯ ಶಿಕ್ಷಣವನ್ನು ಮಂಗಳೂರಿನ ಎನಪೋಯ ವಿಶ್ವವಿದ್ಯಾನಿಲಯದಲ್ಲಿ ಪಡೆದಿದ್ದಾರೆ.
ನನ್ನ ಪತಿ ಸಾಕಷ್ಟು ಸಹಕಾರ, ಪ್ರೋತ್ಸಾಹ ನೀಡಿದ್ದಾರೆ. ಅಂತಿಮ ಸ್ಪರ್ಧೆಯಲ್ಲಿ ನಾನು ಸೇರಿ 10 ಮಂದಿ ಸ್ಪರ್ಧಿಗಳಿದ್ದೆವು. ಫೋಟೊಗ್ರಫಿ, ಕ್ವಿಜ್, ಕ್ಯಾಟ್ವಾಕ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಿರೀಟ ಮುಡಿಗೇರಿಸಿಕೊಂಡೆ. ಬ ಓದುವುದು ಮತ್ತು ಬರೆಯುವುದು, ಸಿನಿಮ, ಕ್ರೀಡೆಗಳು ನನ್ನ ನೆಚ್ಚಿನ ಹವ್ಯಾಸ. ‘ಬೈ ಬಿಲ್ಡ್ ಸೆಲ್’ ಎಂಬ ಪುಸ್ತಕ ಬರೆದಿದ್ದು ಶೀಘ್ರದಲ್ಲೆ ಬಿಡುಗಡೆಯಾಗಲಿದೆ ಎಂದರು..
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…