ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಉಡುಪಿಯಲ್ಲಿ ಹುಟ್ಟಿ ಬೆಳೆದಿರುವ ಸ್ಪೂರ್ತಿ ಶೆಟ್ಟಿ ಅವರು ಸಾಮಾನ್ಯ ಕುಟುಂಬ ಹಿನ್ನೆಲೆಯಿಂದ ಬಂದವರಾಗಿದ್ದು, ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದಿದ್ದಾರೆ.
ಎಂಬಿಎ ಪದವೀಧರೆಯಾಗಿರುವ ಅವರು ಪೂರ್ಣಕಾಲಿಕ ಉದ್ಯೋಗದ ಜೊತೆಗೆ ಹವ್ಯಾಸವಾಗಿ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟು ಇದೀಗ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯ ವೇದಿಕೆಯನ್ನು ತಲುಪಿದ್ದಾರೆ.
ಈ ಹಿಂದೆ ಕರ್ನಾಟಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತು ಪ್ರವೇಶಿಸಲು ವಿಫಲರಾಗಿದ್ದ ಸ್ಪೂರ್ತಿ, ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಿಸ್ ಯುನಿವರ್ಸ್ ಇಂಡಿಯಾ ಫೈನಲ್ಗೆ ಆಯ್ಕೆಯಾಗಿದ್ದಾರೆ.
ಸ್ಪೂರ್ತಿ ಅವರ ತಾಯಿ ಮಣಿಪಾಲ ಆಸ್ಪತ್ರೆಯಲ್ಲಿ ಹೌಸ್ಕೀಪಿಂಗ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಸ್ಪೂರ್ತಿ ಈ ಸಾಧನೆ ಮಾಡಿದ್ದಾರೆ.
ಆಗಸ್ಟ್ 23ರಂದು ನವದೆಹಲಿಯಲ್ಲಿ ನಡೆಯಲಿರುವ ಮಿಸ್ ಯುನಿವರ್ಸ್ ಇಂಡಿಯಾ ಅಂತಿಮ ಸುತ್ತಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸುಮಾರು 50 ಸ್ಪರ್ಧಿಗಳೊಂದಿಗೆ ಸ್ಪೂರ್ತಿ ಶೆಟ್ಟಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ. ಉಡುಪಿ ಜಿಲ್ಲೆಯ ಈ ಯುವತಿಯ ಸಾಧನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…