ಮಂಗಳೂರು: ಕರಾವಳಿ ಮೂಲದ ಚೆಲುವೆ ಆಡ್ಲಿನ್ ಕ್ಯಾಸ್ಟೆಲಿನೋ ಈ ಬಾರಿಯ ಮಿಸ್ ಯೂನಿವರ್ಸ್ 2020 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಮಿಸ್ ದಿವಾ 2020 ಇದರ ಎಂಟನೇ ಆವೃತ್ತಿ ಮುಂಬೈನ ಅಂಧೇರಿಯಲ್ಲಿ ನಡೆದಿತ್ತು. 20 ಮಂದಿ ಹೆಸರಾಂತ ಮಾಡೆಲ್ಗಳು ಪಾಲ್ಗೊಂಡಿದ್ದ ಈ ಸ್ಪರ್ಧೆಯಲ್ಲಿ ಕಳೆದ ಬಾರಿಯ ಚಾಂಪಿಯನ್ ವರ್ತಿಕಾ ಸಿಂಗ್ ವಿಜಯಿಯೆಂದು ಘೋಷಣೆಯಾದ ಬಳಿಕ ಆಡ್ಲಿನ್ಗೆ ಕಿರೀಟ ತೊಡಿಸಿದರು. ವರ್ತಿಕಾ ಸಿಂಗ್ 2019ರ ಸಾಲಿನ ಮಿಸ್ ಯೂನಿವರ್ಸ್ ಇಂಡಿಯಾ ಆಗಿ ಆಯ್ಕೆಯಾಗಿದ್ದರು.
ಕರಾವಳಿ ಮೂಲದ ಆಡ್ಲಿನ್ ಕ್ಯಾಸ್ಟೆಲಿನೋ ಕಳೆದೆರಡು ವರ್ಷದಲ್ಲಿ ಬೇರೆ ಬೇರೆ ವಿಭಾಗದಲ್ಲಿ ಜಯ ಗಳಿಸಿದ್ದ ಮಾಡೆಲ್ಗಳ ಪರಸ್ಪರ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯ ಸುತ್ತಿನಲ್ಲಿ ಆಡ್ಲಿನ್ ಅವರನ್ನು ವಿಜಯಿಯೆಂದು ಘೋಷಿಸಲಾಯಿತು.
ಆವಿತ್ರಿ ಚೌಧರಿ ಮಿಸ್ ದಿವಾ 2020 ಆಗಿ ಆಯ್ಕೆಯಾಗಿದ್ದು, ಮಿಸ್ ಸುಪ್ರನ್ಯಾಷನಲ್ 2020 ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. 2019ರಲ್ಲಿ ಶೆಫಾಲಿ ಸೂದ್ ಸುಪ್ರನ್ಯಾಷನಲ್ ಇಂಡಿಯಾ ಆಗಿ ಮೂಡಿ ಬಂದಿದ್ದರು. ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ 2016ರಲ್ಲಿ ಮಿಸ್ ಸುಪ್ರನ್ಯಾಷನಲ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.
ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ನಡೆದ ಈ ಮಾಡೆಲಿಂಗ್ ಸ್ಪರ್ಧೆಯಲ್ಲಿ ಬಾಲಿವುಡ್ ನಟರಾದ ಅನಿಲ್ ಕಪೂರ್, ಆದಿತ್ಯ ರಾಯ್ ಕಪೂರ್, ಮಿಸ್ ಯೂನಿವರ್ಸ್ 2000 ಲಾರಾ ದತ್ತಾ, ಡಿಸೈನರ್ ಗಳಾದ ಶಿವನ್ ಮತ್ತು ನರೇಶ್, ಮಿಸ್ ಸುಪ್ರಾ ನ್ಯಾಶನಲ್ 2014 ಆಶಾ ಭಟ್, ಮಿಸ್ ಯೂನಿವರ್ಸ್ ಶ್ರೀಲಂಕಾ 2006 ಜಾಕ್ವೇಲಿನ್ ಫೆರ್ನಾಂಡಿಸ್, ಡಿಸೈನರ್ ನಿಕಿಲ್ ಮೆಹ್ರಾ, ಗ್ಯಾವಿನ್ ಮಿಗೆಲ್ ತೀರ್ಪುಗಾರರ ತಂಡದಲ್ಲಿದ್ದರು. ನಟಿ ಮಲೈಕಾ ಅರೋರಾ ಫೈನಲ್ ಸ್ಪರ್ಧೆಯಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…