ಬೆಂಗಳೂರು : ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರ ಯಾಂತ್ರೀಕೃತ ಬೋಟ್ ಗಳಿಗೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ತೆರಿಗೆ ರಹಿತ ಡೀಸೆಲ್ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಡೀಸೆಲ್ ಬೆಲೆ ಏರಿಕೆ, ಮತ್ಸ್ಯಕ್ಷಾಮ ಹಾಗೂ ಮೀನಿಗೆ ಯೋಗ್ಯ ಧಾರಣೆ ಸಿಗದೆ ಮೀನುಗಾರರು ಸುಸ್ತಿದಾರರಾಗಿದ್ದಾರೆ. ಪ್ರಸ್ತುತ ಮೀನುಗಾರರಿಂದ ಮಾರಾಟ ತೆರಿಗೆ ಪಡೆದುಕೊಂಡು ನಂತರ ಅವರ ಖಾತೆಗೆ ಈ ಮೊತ್ತವನ್ನು ಸರ್ಕಾರ ಜಮಾ ಮಾಡುತ್ತಿದೆ. ಈ ತೆರಿಗೆ ಹಣ ಕ್ರಮಬದ್ಧವಾಗಿ ಬರದಿರುವ ಕಾರಣ ತೊಂದರೆ ಆಗುತ್ತಿದೆ. ಆದ್ದರಿಂದ ಹಿಂದಿನಂತೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆರಹಿತ ಡೀಸೆಲ್ ನೀಡುವಂತೆ ಹಾಗೂ ಡೀಸೆಲ್ ಪ್ರಮಾಣ ಹೆಚ್ಚಿಸುವಂತೆ ನಿಯೋಗ ಮನವಿ ಮಾಡಿತ್ತು.
ಪರಿಹಾರ: ನೌಕಾಪಡೆಯ ಹಡಗು ಡಿಕ್ಕಿ ಹೊಡೆದು ಸುರ್ವಣ ತ್ರಿಭುಜ ಎಂಬ ದೋಣಿಯಲ್ಲಿದ್ದ ಮೀನುಗಾರರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಗಳಿಗೆ ಪರಿಹಾರ ಕೊಡಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…