ಬೆಂಗಳೂರು : ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರ ಯಾಂತ್ರೀಕೃತ ಬೋಟ್ ಗಳಿಗೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ತೆರಿಗೆ ರಹಿತ ಡೀಸೆಲ್ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಡೀಸೆಲ್ ಬೆಲೆ ಏರಿಕೆ, ಮತ್ಸ್ಯಕ್ಷಾಮ ಹಾಗೂ ಮೀನಿಗೆ ಯೋಗ್ಯ ಧಾರಣೆ ಸಿಗದೆ ಮೀನುಗಾರರು ಸುಸ್ತಿದಾರರಾಗಿದ್ದಾರೆ. ಪ್ರಸ್ತುತ ಮೀನುಗಾರರಿಂದ ಮಾರಾಟ ತೆರಿಗೆ ಪಡೆದುಕೊಂಡು ನಂತರ ಅವರ ಖಾತೆಗೆ ಈ ಮೊತ್ತವನ್ನು ಸರ್ಕಾರ ಜಮಾ ಮಾಡುತ್ತಿದೆ. ಈ ತೆರಿಗೆ ಹಣ ಕ್ರಮಬದ್ಧವಾಗಿ ಬರದಿರುವ ಕಾರಣ ತೊಂದರೆ ಆಗುತ್ತಿದೆ. ಆದ್ದರಿಂದ ಹಿಂದಿನಂತೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆರಹಿತ ಡೀಸೆಲ್ ನೀಡುವಂತೆ ಹಾಗೂ ಡೀಸೆಲ್ ಪ್ರಮಾಣ ಹೆಚ್ಚಿಸುವಂತೆ ನಿಯೋಗ ಮನವಿ ಮಾಡಿತ್ತು.
ಪರಿಹಾರ: ನೌಕಾಪಡೆಯ ಹಡಗು ಡಿಕ್ಕಿ ಹೊಡೆದು ಸುರ್ವಣ ತ್ರಿಭುಜ ಎಂಬ ದೋಣಿಯಲ್ಲಿದ್ದ ಮೀನುಗಾರರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಗಳಿಗೆ ಪರಿಹಾರ ಕೊಡಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…