ಬೆಂಗಳೂರು : ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರ ಯಾಂತ್ರೀಕೃತ ಬೋಟ್ ಗಳಿಗೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ತೆರಿಗೆ ರಹಿತ ಡೀಸೆಲ್ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಡೀಸೆಲ್ ಬೆಲೆ ಏರಿಕೆ, ಮತ್ಸ್ಯಕ್ಷಾಮ ಹಾಗೂ ಮೀನಿಗೆ ಯೋಗ್ಯ ಧಾರಣೆ ಸಿಗದೆ ಮೀನುಗಾರರು ಸುಸ್ತಿದಾರರಾಗಿದ್ದಾರೆ. ಪ್ರಸ್ತುತ ಮೀನುಗಾರರಿಂದ ಮಾರಾಟ ತೆರಿಗೆ ಪಡೆದುಕೊಂಡು ನಂತರ ಅವರ ಖಾತೆಗೆ ಈ ಮೊತ್ತವನ್ನು ಸರ್ಕಾರ ಜಮಾ ಮಾಡುತ್ತಿದೆ. ಈ ತೆರಿಗೆ ಹಣ ಕ್ರಮಬದ್ಧವಾಗಿ ಬರದಿರುವ ಕಾರಣ ತೊಂದರೆ ಆಗುತ್ತಿದೆ. ಆದ್ದರಿಂದ ಹಿಂದಿನಂತೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆರಹಿತ ಡೀಸೆಲ್ ನೀಡುವಂತೆ ಹಾಗೂ ಡೀಸೆಲ್ ಪ್ರಮಾಣ ಹೆಚ್ಚಿಸುವಂತೆ ನಿಯೋಗ ಮನವಿ ಮಾಡಿತ್ತು.
ಪರಿಹಾರ: ನೌಕಾಪಡೆಯ ಹಡಗು ಡಿಕ್ಕಿ ಹೊಡೆದು ಸುರ್ವಣ ತ್ರಿಭುಜ ಎಂಬ ದೋಣಿಯಲ್ಲಿದ್ದ ಮೀನುಗಾರರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಗಳಿಗೆ ಪರಿಹಾರ ಕೊಡಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…