ಬೆಂಗಳೂರು : ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರ ಯಾಂತ್ರೀಕೃತ ಬೋಟ್ ಗಳಿಗೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ತೆರಿಗೆ ರಹಿತ ಡೀಸೆಲ್ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಡೀಸೆಲ್ ಬೆಲೆ ಏರಿಕೆ, ಮತ್ಸ್ಯಕ್ಷಾಮ ಹಾಗೂ ಮೀನಿಗೆ ಯೋಗ್ಯ ಧಾರಣೆ ಸಿಗದೆ ಮೀನುಗಾರರು ಸುಸ್ತಿದಾರರಾಗಿದ್ದಾರೆ. ಪ್ರಸ್ತುತ ಮೀನುಗಾರರಿಂದ ಮಾರಾಟ ತೆರಿಗೆ ಪಡೆದುಕೊಂಡು ನಂತರ ಅವರ ಖಾತೆಗೆ ಈ ಮೊತ್ತವನ್ನು ಸರ್ಕಾರ ಜಮಾ ಮಾಡುತ್ತಿದೆ. ಈ ತೆರಿಗೆ ಹಣ ಕ್ರಮಬದ್ಧವಾಗಿ ಬರದಿರುವ ಕಾರಣ ತೊಂದರೆ ಆಗುತ್ತಿದೆ. ಆದ್ದರಿಂದ ಹಿಂದಿನಂತೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆರಹಿತ ಡೀಸೆಲ್ ನೀಡುವಂತೆ ಹಾಗೂ ಡೀಸೆಲ್ ಪ್ರಮಾಣ ಹೆಚ್ಚಿಸುವಂತೆ ನಿಯೋಗ ಮನವಿ ಮಾಡಿತ್ತು.
ಪರಿಹಾರ: ನೌಕಾಪಡೆಯ ಹಡಗು ಡಿಕ್ಕಿ ಹೊಡೆದು ಸುರ್ವಣ ತ್ರಿಭುಜ ಎಂಬ ದೋಣಿಯಲ್ಲಿದ್ದ ಮೀನುಗಾರರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಗಳಿಗೆ ಪರಿಹಾರ ಕೊಡಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…