ಮೀನುಗಾರರನ್ನ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ
ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿಯ ಕುಶಲೋಪರಿ ವಿಚಾರಿಸಲು ಮೂಳೂರಿನ ಸಾಯಿರಾಧ ರೇಸಾರ್ಟ್ ಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸುವರ್ಣ ತ್ರಿಭುಜಬೋಟ್ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಮಾಧ್ಯಮದವರ ಜತೆ ಮಾತಾಡಿ” ಮೀನುಗಾರರ ಜೀವದ ಜತೆಗೆ ಚುನಾವಣೆ ಮುಗಿಯುವರೆಗೆ ನಾಟಕಮಾಡಿದ ಬಿಜೆಪಿ ಈಗ ಶಾಸಕರೇ ಬೋಟ್ ಹುಡುಕಿದ ಹಾಗೇ ಹೆಸರು ಮಾಡಲು ಹೊರಟಿದ್ದಾರೆ ಇದು ಅತ್ಯಂತ ಹೇಸಿಗೆ ಹಾಗೂ ನಾನು ಈ ಹಿಂದೆ ಸ್ಪಷ್ಟ ಪಡಿಸದಂತೆ ನೌಕಾಪಡೆಯ ಬೋಟ್ ನಮ್ಮ ಬೋಟ್ ಗೆ ಡಿಕ್ಕಿ ಹೊಡೆದು ಮೀನುಗಾರರನ್ನ ಕೊಲೆ ಮಾಡಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಮಾತ್ರವಲ್ಲದೆ ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಮುಖಾಂತರ ವಿಶೇಷ ನ್ಯಾಯಂಗ ತನಿಖೆ ನಡೆಸಿ ನೌಕಪಡೆಯ ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.ಮತ್ತು ಮೃತ ಮೀನುಗಾರರ ಕುಟುಂಬಕ್ಕೆ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸುತ್ತೇನೆ ಎಂದರು.
ಕುಮಾರಸ್ವಾಮಿ ವಿಚಾರ ಅಥವಾ ಫಲಿತಾಂಶ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂಜರಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…