ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರಿಗೆ 2026-27ನೇ ಸಾಲಿನಲ್ಲಿ 24,090 ಕಿಲೋ ಲೀಟರ್(ಕೆ.ಎಲ್.) ಸಬ್ಸಿಡಿ ರಹಿತ ಸೀಮೆಎಣ್ಣೆಯನ್ನು ಪ್ರತ್ಯೇಕವಾಗಿ ನೀಡುವಂತೆ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಾಂಪ್ರದಾಯಿಕ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಸಂಸದ ರಾಘವೇಂದ್ರ ಅವರು, ಪ್ರಸಕ್ತ ಸೀಮೆಎಣ್ಣೆ ಬೆಲೆ 160 ರೂ. ಗಿಂತ ಹೆಚ್ಚಾಗಿದೆ. ರಾಜ್ಯದ ಸಬ್ಸಿಡಿ ಬಳಿಕವೂ ಮೀನುಗಾರರ ಮೇಲೆ ಸುಮಾರು 125 ರೂ. ನಷ್ಟು ಹೊರೆ ಪ್ರತಿ ಲೀಟರ್ಗೆ ಬೀಳುತ್ತಿದೆ. 8,030 ದೋಣಿಗಳಿಗೆ ವಾರ್ಷಿಕವಾಗಿ 24,090 ಕೆ.ಎಲ್. ಸೀಮೆಎಣ್ಣೆ ಅಗತ್ಯವಿದೆ. ಆದರೆ ಪ್ರಸ್ತುತ ಪಿಡಿಎಸ್ ಮುಖೇನ ಪ್ರತೀ ತ್ರೈಮಾಸಿಕಕ್ಕೆ ಕೇವಲ 2,868 ಕೆ. ಎಲ್. ಹಂಚಿಕೆಯಾಗುತ್ತಿದೆ. ಇದು ಮೀನುಗಾರಿಕೆಗೆ ಸಾಲುತ್ತಿಲ್ಲ. ಹಾಗಾಗಿ ಸಬ್ಸಿಡಿ ರಹಿತ ಸೀಮೆಎಣ್ಣೆಯನ್ನು ಪ್ರತ್ಯೇಕವಾಗಿ ಹಂಚಿಕೆ ಮಾಡಬೇಕು ಎಂದರು ಮನವಿ ಮಾಡಿದರು. ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಂಸದರು ತಿಳಿಸಿದ್ದಾರೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…