Featured

ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ – Vishwanews24

ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ

ಯಾದಗಿರಿ: ‘ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ’ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ನಗರದ ಹೊರವಲಯದಲ್ಲಿ ಜಿಲ್ಲಾಡಳಿತ, ಮೀನುಗಾರಿಕೆ ಇಲಾಖೆ ವತಿಯಿಂದ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಒಳನಾಡು ಮೀನುಗಾರಿಕೆ ಹಾಗೂ ಕರಾವಳಿ ಮೀನುಗಾರಿಕೆಯಿಂದ ಹಲವಾರು ಕುಟುಂಬಗಳ ಜೀವನ ನಿರ್ವಹಣೆಯಾಗುತ್ತಿದೆ. ಹೀಗಾಗಿ ಅವರಿಗೆ ಆಳ ಸಮದ್ರ ಮೀನುಗಾರಿಕೆ ಅವಕಾಶ ಕಲ್ಪಿಸಲಾಗಿದ್ದು, ಮೀನುಗಾರರು ಸಮುದ್ರದಲ್ಲಿ ಹಿಡಿದ ಮೀನುಗಳನ್ನು ತಮಗೆ ಒದಗಿಸಲಾದ ಬೋಟ್ ಮೂಲಕ ತಂದು ಮೀನುಗಾರಿಕೆ ಮಾಡಲು ಹಾಗೂ ಅವುಗಳನ್ನು ರಫ್ತು ಮಾಡಲು ಅನುಕೂಲವಾಗಲಿದೆ’ ಎಂದರು.

‘ಕೇಂದ್ರ ಸರ್ಕಾರ ಮತ್ಸ್ಯ ಸಂಪದ ಯೋಜನೆ ಜಾರಿಗೆ ತಂದಿದ್ದು, ರಾಜ್ಯದಲ್ಲಿನ ಮೀನುಗಾರರಿಗೆ ಈ ಯೋಜನೆಯಡಿಯಲ್ಲಿ ಮೀನುಗಾರಿಕೆ ಮಾಡಲು ಅನುಕೂಲವಾಗುವಂತೆ ಒಂದು ನೂರು ಬೋಟ್‌ಗಳನ್ನು ಒದಗಿಸಲು ಬಜೆಟ್‌ನಲ್ಲಿ ಅವಕಾಶ ಒದಗಿಸಿದೆ’ ಎಂದು ತಿಳಿಸಿದರು.

‘ಜಿಲ್ಲೆಯ ಭೀಮಾ ನದಿಯಿಂದ ಹಾಗೂ ಅಕ್ಕಪಕ್ಕ ಕೆರೆಗಳಿಂದ ಹಿಡಿದ ಮೀನುಗಳನ್ನು ಇಲ್ಲಿಯೇ ಮಾರಾಟ ಮಾಡಲು ಮೀನು ಮಾರುಕಟ್ಟೆ ತೆರೆಯಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಚಿವರು ಸಲಹೆ ನೀಡಿದರು.

‘ಮೀನುಗಾರರು ಹಾಗೂ ಖರೀದಿದಾರಿಗೆ ಅನುಕೂಲ ಕಲ್ಪಿಸಲಾಗಿದ್ದು, ಮಾರುಕಟ್ಟೆಗೆ ಬಂದು ಸೂಕ್ತ ಬೆಲೆಗೆ ಮಾರಾಟ ಮಾಡಲು ಅನುಕೂಲವಾಗಲಿದೆ’ ಎಂದರು.’ಮೀನು ಮಾರುಕಟ್ಟೆಯಲ್ಲಿ ಮೀನುಗಾರರು ಮಾರಾಟಕ್ಕೆ ತರುವ ಮೀನುಗಳು ಕೆಡದಂತೆ ಇರಿಸಲು ಶೀಥಲೀಕರಣ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮೀನಿ‌ನ ತಾಜಾತನ ಕಾಪಾಡಬಹುದಾಗಿದೆ’ ಎಂದರು.

ಮಂಗಳೂರು ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ್ ಆರ್ ನಾಯ್ಕ್‌, ಕೃಷ್ಣಾ ಕಾಡಾ ಭೀಮರಾಯನಗುಡಿ ಶರಣಪ್ಪ ತಳವಾರ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ಮೀನುಗಾರಿಕೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ ಈ ಸಂದರ್ಭದಲ್ಲಿ ಇದ್ದರು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

31 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

40 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

47 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

54 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago