Featured

ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ – Vishwanews24

ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ

ಯಾದಗಿರಿ: ‘ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ’ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ನಗರದ ಹೊರವಲಯದಲ್ಲಿ ಜಿಲ್ಲಾಡಳಿತ, ಮೀನುಗಾರಿಕೆ ಇಲಾಖೆ ವತಿಯಿಂದ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಒಳನಾಡು ಮೀನುಗಾರಿಕೆ ಹಾಗೂ ಕರಾವಳಿ ಮೀನುಗಾರಿಕೆಯಿಂದ ಹಲವಾರು ಕುಟುಂಬಗಳ ಜೀವನ ನಿರ್ವಹಣೆಯಾಗುತ್ತಿದೆ. ಹೀಗಾಗಿ ಅವರಿಗೆ ಆಳ ಸಮದ್ರ ಮೀನುಗಾರಿಕೆ ಅವಕಾಶ ಕಲ್ಪಿಸಲಾಗಿದ್ದು, ಮೀನುಗಾರರು ಸಮುದ್ರದಲ್ಲಿ ಹಿಡಿದ ಮೀನುಗಳನ್ನು ತಮಗೆ ಒದಗಿಸಲಾದ ಬೋಟ್ ಮೂಲಕ ತಂದು ಮೀನುಗಾರಿಕೆ ಮಾಡಲು ಹಾಗೂ ಅವುಗಳನ್ನು ರಫ್ತು ಮಾಡಲು ಅನುಕೂಲವಾಗಲಿದೆ’ ಎಂದರು.

‘ಕೇಂದ್ರ ಸರ್ಕಾರ ಮತ್ಸ್ಯ ಸಂಪದ ಯೋಜನೆ ಜಾರಿಗೆ ತಂದಿದ್ದು, ರಾಜ್ಯದಲ್ಲಿನ ಮೀನುಗಾರರಿಗೆ ಈ ಯೋಜನೆಯಡಿಯಲ್ಲಿ ಮೀನುಗಾರಿಕೆ ಮಾಡಲು ಅನುಕೂಲವಾಗುವಂತೆ ಒಂದು ನೂರು ಬೋಟ್‌ಗಳನ್ನು ಒದಗಿಸಲು ಬಜೆಟ್‌ನಲ್ಲಿ ಅವಕಾಶ ಒದಗಿಸಿದೆ’ ಎಂದು ತಿಳಿಸಿದರು.

‘ಜಿಲ್ಲೆಯ ಭೀಮಾ ನದಿಯಿಂದ ಹಾಗೂ ಅಕ್ಕಪಕ್ಕ ಕೆರೆಗಳಿಂದ ಹಿಡಿದ ಮೀನುಗಳನ್ನು ಇಲ್ಲಿಯೇ ಮಾರಾಟ ಮಾಡಲು ಮೀನು ಮಾರುಕಟ್ಟೆ ತೆರೆಯಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಚಿವರು ಸಲಹೆ ನೀಡಿದರು.

‘ಮೀನುಗಾರರು ಹಾಗೂ ಖರೀದಿದಾರಿಗೆ ಅನುಕೂಲ ಕಲ್ಪಿಸಲಾಗಿದ್ದು, ಮಾರುಕಟ್ಟೆಗೆ ಬಂದು ಸೂಕ್ತ ಬೆಲೆಗೆ ಮಾರಾಟ ಮಾಡಲು ಅನುಕೂಲವಾಗಲಿದೆ’ ಎಂದರು.’ಮೀನು ಮಾರುಕಟ್ಟೆಯಲ್ಲಿ ಮೀನುಗಾರರು ಮಾರಾಟಕ್ಕೆ ತರುವ ಮೀನುಗಳು ಕೆಡದಂತೆ ಇರಿಸಲು ಶೀಥಲೀಕರಣ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮೀನಿ‌ನ ತಾಜಾತನ ಕಾಪಾಡಬಹುದಾಗಿದೆ’ ಎಂದರು.

ಮಂಗಳೂರು ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ್ ಆರ್ ನಾಯ್ಕ್‌, ಕೃಷ್ಣಾ ಕಾಡಾ ಭೀಮರಾಯನಗುಡಿ ಶರಣಪ್ಪ ತಳವಾರ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ಮೀನುಗಾರಿಕೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ ಈ ಸಂದರ್ಭದಲ್ಲಿ ಇದ್ದರು.

Vishwa News 24

Recent Posts

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

5 minutes ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 hour ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 hour ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 hour ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

1 hour ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago