ಉಡುಪಿ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ನಾಪತ್ತೆಯಾಗಿ 20 ದಿನ ಕಳೆದಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರ ಮೀನುಗಾರರ ಪತ್ತೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಮೀನುಗಾರರು ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.
ಮಲ್ಪೆಯಿಂದ ಆಳಸಮುದ್ರಕ್ಕೆ ತೆರಳಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ಹಾಗೂ ಅದರಲ್ಲಿದ್ದ 7 ಮೀನುಗಾರರನ್ನು ಪತ್ತೆ ಹಚ್ಚುವಲ್ಲಿ ರಾಜ್ಯ- ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಕರಾವಳಿಯ ಮೀನುಗಾರರು ಅನಾಥವಾಗಿದ್ದಾರೆ, ಈ ಹಿನ್ನಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮೀನುಗಾರರು ನಿರ್ಧರಿಸಿದ್ದಾರೆ..
ಜನವರಿ 6 ರಂದು ಪ್ರತಿಭಟನೆಯ ಅಂಗವಾಗಿ ಮಲ್ಪೆಯಿಂದ ಉಡುಪಿಯವರೆಗೆ ಪಾದಯಾತ್ರೆ ಮಾಡುತ್ತೇವೆ. 50 ಸಾವಿರ ಮಂದಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡುತ್ತೇವೆ. ರಾಜ್ಯ, ಕೇಂದ್ರ ಸರ್ಕಾರಕ್ಕೆ ಬಿಸಿಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟ ಪಡಿಸಿದರು. ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ರಾಜ್ಯ ಸರಕಾರ ತಲೆ ಕೆಡಿಸಿಕೊಡಿಲ್ಲ. ಸಿಎಂ ಹಾಗು ಉಸ್ತುವಾರಿ ಸಚಿವರು ಇತ್ತ ತಲೆಯೇ ಹಾಕಿಲ್ಲ. ಇದೇ ರೀತಿ ರೈತರಿಗೆ ಸಮಸ್ಯೆಯಾದಾಗಲೂ ಅಸಡ್ಡೆ ತೋರಿಸುತ್ತೀರಾ? ಎಂದು ಅವರು ಕಿಡಿಕಾರಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…