ಉಡುಪಿ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ನಾಪತ್ತೆಯಾಗಿ 20 ದಿನ ಕಳೆದಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರ ಮೀನುಗಾರರ ಪತ್ತೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಮೀನುಗಾರರು ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.
ಮಲ್ಪೆಯಿಂದ ಆಳಸಮುದ್ರಕ್ಕೆ ತೆರಳಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ಹಾಗೂ ಅದರಲ್ಲಿದ್ದ 7 ಮೀನುಗಾರರನ್ನು ಪತ್ತೆ ಹಚ್ಚುವಲ್ಲಿ ರಾಜ್ಯ- ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಕರಾವಳಿಯ ಮೀನುಗಾರರು ಅನಾಥವಾಗಿದ್ದಾರೆ, ಈ ಹಿನ್ನಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮೀನುಗಾರರು ನಿರ್ಧರಿಸಿದ್ದಾರೆ..
ಜನವರಿ 6 ರಂದು ಪ್ರತಿಭಟನೆಯ ಅಂಗವಾಗಿ ಮಲ್ಪೆಯಿಂದ ಉಡುಪಿಯವರೆಗೆ ಪಾದಯಾತ್ರೆ ಮಾಡುತ್ತೇವೆ. 50 ಸಾವಿರ ಮಂದಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡುತ್ತೇವೆ. ರಾಜ್ಯ, ಕೇಂದ್ರ ಸರ್ಕಾರಕ್ಕೆ ಬಿಸಿಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟ ಪಡಿಸಿದರು. ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ರಾಜ್ಯ ಸರಕಾರ ತಲೆ ಕೆಡಿಸಿಕೊಡಿಲ್ಲ. ಸಿಎಂ ಹಾಗು ಉಸ್ತುವಾರಿ ಸಚಿವರು ಇತ್ತ ತಲೆಯೇ ಹಾಕಿಲ್ಲ. ಇದೇ ರೀತಿ ರೈತರಿಗೆ ಸಮಸ್ಯೆಯಾದಾಗಲೂ ಅಸಡ್ಡೆ ತೋರಿಸುತ್ತೀರಾ? ಎಂದು ಅವರು ಕಿಡಿಕಾರಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…