ಉಡುಪಿ: ಮೀನುಗಾರರ ಸಾಲಮನ್ನದ ನಿರ್ಣಯವನ್ನು ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಕೈಗೊಂಡಿರುವುದು ಕೈಗೊಂಡಿರುವುದು ಮೀನುಗಾರರ ಮೇಲೆ ಅವರಿಗಿರುವ ಕಾಳಜಿಯನ್ನು ವ್ಯಕ್ತಪಡಿಸುತ್ತದೆ ಎಂದು ಮೀನುಗಾರ ಮುಖಂಡ ಯಶಪಾಲ ಸುವರ್ಣ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಕಳೆದ ಬಾರಿ ಚುನಾವಣಾ ಸಮಯದಲ್ಲಿ ಕರಾವಳಿಗರಿಗೆ ಕೊಟ್ಟ ಮಾತನ್ನು ನೆನಪಿಟ್ಟುಕೊಂಡು ಈಗ ಪೂರೈಸಿದ್ದಾರೆ ಅವರಿಗೆ ನಾಡಿನ ಸಮಸ್ತ ಮೀನುಗಾರ ಬಂಧುಗಳ ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ.
ಕರಾವಳಿಯ ಬಹುತೇಕ ಮೀನುಗಾರರು ಸ್ಥಳೀಯ ಸಹಕಾರಿ ಸಂಘಗಳಲ್ಲಿ ಸಂಘಗಳಲ್ಲಿ ಸಾಲ ಮಾಡಿರುತ್ತಾರೆ ಸುಮಾರು 70ಕ್ಕೂ ಅಧಿಕ ಸಹಕಾರಿ ಸಂಘಗಳು ಮೀನುಗಾರರ ಶ್ರೇಯೋಭಿವೃದ್ಧಿಗೆ ದುಡಿಯುತ್ತಿವೆ ಇದೀಗ ಕೇವಲ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ವಷ್ಟೇ ಮನ್ನಾ ಮಾತ್ರ ಘೋಷಣೆಯಾಗಿದ್ದು,ಮಾನ್ಯ ಮುಖ್ಯಮಂತ್ರಿಗಳು ಸಹಕಾರಿ ಸಂಘಗಳ ಸಾಲವನ್ನೂ ಕೂಡ ಮನ್ನಾ ಮಾಡಬೇಕು ಎಂದು ಅವರು ವಿನಂತಿಸಿದ್ದಾರೆ.
ಕರಾವಳಿಯ ಮೀನುಗಾರ ಸಮುದಾಯದ ವ್ಯಕ್ತಿಗಳೇ ಮಂತ್ರಿ ಸ್ಥಾನವನ್ನು ಅಲಂಕರಿಸಿ ಅಧಿಕಾರವನ್ನು ಅನುಭವಿಸಿದ್ದರೂ ಮೀನುಗಾರರಿಗೆ ಅವರು ನೀಡಿದ ಕೊಡುಗೆ ದೊಡ್ಡ ಶೂನ್ಯ. ಕನಿಷ್ಠಪಕ್ಷ ಮೀನುಗಾರರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವ ಪ್ರಮಾಣಿಕ ಪ್ರಯತ್ನವೂ ಅವರಿಂದ ನಡೆದಿರಲಿಲ್ಲ ಎಂದರು.
ಮೀನುಗಾರರು ಹಲವು ದಶಕಗಳಿಂದ ತಮ್ಮ ಹಲವಾರು ಸಮಸ್ಯೆಗಳ ಬಗ್ಗೆ ಮನವಿಪತ್ರಗಳನ್ನು ಕೊಡುತ್ತಾ ಬಂದಿದ್ದರೂ ಅದರಲ್ಲಿ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ ಮಾನ್ಯ ಯಡಿಯೂರಪ್ಪ ಅವರು ಮೀನುಗಾರರ ಮೇಲೆ ಇರಿಸಿರುವ ಕಾಳಜಿಯನ್ನು ಕಂಡಾಗ ಈ ಬಾರಿ ನಮ್ಮ ಆಶಯಗಳು ಈಡೇರ ಬಹುದು ಎಂಬ ಆಶಾಭಾವನೆ ಮೂಡಿದೆ. ಕೂಡಲೆ ನಮ್ಮ ಮೀನುಗಾರರ ನಿಯೋಗ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಗ್ರ ಮೀನುಗಾರಿಕಾ ನೀತಿಯ ಬಗ್ಗೆ ಚರ್ಚಿಸಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…