Featured

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಲ್ಪೆ ಬಂದರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಲ್ಪೆ ಬಂದರಿನ ನೂತನ ಪ್ರವೇಶ ದ್ವಾರದ ಕಾಮಗಾರಿಯ ಬಗ್ಗೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ, ಹಾಗೂ ಕಾಮಗಾರಿಯ ಹಿನ್ನೆಲೆ ಪಾರ್ಕಿಂಗ್ ಪ್ರದೇಶದಲ್ಲಿ ಸಂಗ್ರಹಿಸಿರುವ ಮರಳನ್ನು ತಕ್ಷಣ ತೆರವು ಮಾಡಿ ವಾಹನಗಳ ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸುವಂತೆ ಹೇಳಿದರು.

ಬಂದರಿನ ನಿರ್ಗಮನ ದ್ವಾರ ಅಗಲೀಕರಣಗೊಳ್ಳುವ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಅಲ್ಲಿದ್ದ ರಿಕ್ಷಾ ನಿಲ್ದಾಣವನ್ನು ಈಗಾಗಲೇ ಗುರುತಿಸಿರುವ ಸೂಕ್ತ ಜಾಗಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ರಿಕ್ಷಾ ಚಾಲಕರ ಮನವಿಯಂತೆ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು.

ಮಲ್ಪೆ ಬಂದರಿನ ಮಂಜಿ ಧಕ್ಕೆ ಹಾಗೂ ಬಂದರಿನ ಪರಿಸರದಲ್ಲಿ ರಾತ್ರಿ ವೇಳೆ ದಾರಿ ದೀಪದ ಸಮಸ್ಯೆ ಬಗ್ಗೆ ತಕ್ಷಣ ಸಮರ್ಪಕ ದಾರಿ ದೀಪದ ವ್ಯವಸ್ಥೆ, ಬಂದರಿನ ಸ್ವಚ್ಚತೆ, ಭದ್ರತೆಯ ದೃಷ್ಟಿಯಲ್ಲಿ ಸೆಕ್ಯೂರಿಟಿ ಸಿಬ್ಬಂದಿ, ಸಿ.ಸಿ. ಟಿ. ವಿ ಅಳವಡಿಕೆ ಮೊದಲಾದ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಂಡು ಮೀನುಗಾರರಿಗೆ ಯಾವುದೇ ಸಮಸ್ಯೆಯಾಗದಂತೆ ಮುತುವರ್ಜಿ ವಹಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಮೀನುಗಾರ ಮುಖಂಡರಾದ ಸುರೇಶ್ ಸಾಲ್ಯಾನ್, ರವಿ ಸಾಲ್ಯಾನ್, ರಮೇಶ್ ಕೋಟ್ಯಾನ್, ಲಕ್ಷ್ಮೀಶ ಬಂಗೇರ, ಮಲ್ಪೆ ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳು, ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

25 minutes ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

35 minutes ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

43 minutes ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

53 minutes ago

ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ – vishwanews24

ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ : ರಾಜ್ಯ ಸರಕಾರ ಮಹತ್ವದ ನಿರ್ಧಾರ ಬೆಂಗಳೂರು: ವಿದ್ಯಾರ್ಥಿಗಳ…

1 hour ago

ಉಡುಪಿ: ಬಸ್‌ ಢಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ನಿಧನ – vishwanews24

ಉಡುಪಿ: ಬಸ್‌ ಢಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ನಿಧನ ಉಡುಪಿ: ನಗರದ ಕೋರ್ಟ್ ರಸ್ತೆ ಸಮೀಪ ಶನಿವಾರ…

1 hour ago