Featured

ಮೀನುಗಾರಿಕಾ ಬೋಟುಗಳಲ್ಲಿ ಸೋಲಾರ್‌ ಅಳವಡಿಕೆ ಕುರಿತು ಪರಿಶೀಲಿಸಿ ಕ್ರಮ: ಎಸ್‌. ಅಂಗಾರ -Vishwanews24

ಮೀನುಗಾರಿಕಾ ಬೋಟುಗಳಲ್ಲಿ ಸೋಲಾರ್‌ ಅಳವಡಿಕೆ ಕುರಿತು ಪರಿಶೀಲಿಸಿ ಕ್ರಮ: ಎಸ್‌. ಅಂಗಾರ -Vishwanews24

ಮಂಗಳೂರು: ಯಾಂತ್ರೀಕೃತ ಮೀನುಗಾರಿಕೆಗೆ ತೆರಳುವ ಬೋಟುಗಳಲ್ಲಿ ದ್ವಿಮುಖ ಸಂವಹನ ಸಂಪರ್ಕ ಸಾಧನಕ್ಕೆ ಅಗತ್ಯವಿರುವ ಬ್ಯಾಟರಿಯನ್ನು ಸೋಲಾರ್‌ ಮೂಲಕ ರಿಚಾರ್ಜ್‌ ಮಾಡಿಕೊಳ್ಳುವ ಸಾಧ್ಯತೆಗಳ ಕುರಿತು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್‌. ಅಂಗಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೀನುಗಾರಿಕಾ ಬೋಟ್‌ಗಳಲ್ಲಿ ಸಂಪರ್ಕ ಸಾಧನಗಳನ್ನು ಅಳವಡಿಸುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ :ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24

ಮೀನುಗಾರರ ಸುರಕ್ಷೆ ಸರಕಾರದ ಆದ್ಯತೆ. ಸಮುದ್ರದ ಬಹುದೂರ ಹೋಗಿ ಮೀನುಗಾರಿಕೆ ಮಾಡುವವರ ಬೋಟುಗಳ ಸ್ಥಿತಿಗತಿಗಳನ್ನು ಅವಲೋಕಿಸಲು ಹಾಗೂ ಮೀನುಗಾರರ ಸುರಕ್ಷತೆ ದೃಷ್ಟಿಯಿಂದ ದ್ವಿಮುಖ ಸಂವಹನ ಸಂಪರ್ಕ ಸಾಧನ ಕಡ್ಡಾಯಗೊಳಿಸಲಾಗಿದೆ. ಆದರೆ ಈ ಸಾಧನದಲ್ಲಿರುವ ಬ್ಯಾಟರಿಗಳ ಚಾರ್ಜ್‌ ಖಾಲಿಯಾದಲ್ಲಿ ಬೋಟುಗಳಲ್ಲಿಯೇ ಸೋಲಾರ್‌ ಮೂಲಕ ಅವುಗಳನ್ನು ರಿಚಾರ್ಜ್‌ ಮಾಡಿಕೊಳ್ಳಲು ಸಾಧ್ಯವಾಗುವಂತಹ ಯತ್ನಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಉಪ್ಪು ನೀರಿನಲ್ಲಿ ಸೋಲಾರ್‌ ಪ್ಯಾನಲ್‌ಗಳು ಸೂಕ್ತವಾಗಿ ಕಾರ್ಯನಿರ್ವಹಿಸುವುದಿಲ್ಲ ಹಾಗೂ ಬಾಳಿಕೆಯೂ ಬರುವುದಿಲ್ಲ ಹಾಗಾಗಿ ಪರ್ಯಾಯ ಕ್ರಮಗಳನ್ನು ಪತ್ತೆ ಮಾಡಲು ಚಿಂತಿಸಲಾಗಿದೆ. ಬೋಟ್‌ಗಳ ಮೇಲೆ ಕವಚದಂತಹ ಸೋಲಾರ್‌ ಫಲಕಗಳನ್ನು ಅಳವಡಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಈ ಸಾಧನಗಳಲ್ಲಿಕಂಡು ಬಂದಿರುವ ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಲು ತಜ್ಞರ ಸಮಿತಿ ರಚಿಸಿ ಅವುಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮೀನುಗಾರ ಸ್ನೇಹಿಯನ್ನಾಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮೀನುಗಾರರಿಗೆ ಡೀಸೆಲ್‌ ಸಬ್ಸಿಡಿ ಈಗಾಗಲೇ ನೀಡಲಾಗುತ್ತಿದೆ. ಅದನ್ನು 1.50 ಲಕ್ಷ ಕೆ.ಎಲ್‌ಗೆ ವಿಸ್ತರಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ದ್ವಿಮುಖ ಸಂವಹನ ಸಂಪರ್ಕ ಸಾಧನದಲ್ಲಿ ಕಂಡುಬಂದಿರುವ ದೋಷಗಳನ್ನು ಸರಿಪಡಿಸಲು ತಾಂತ್ರಿಕ ನಿಪುಣರ ಸಮಿತಿ ರಚಿಸಿ, ಆ ಸಮಿತಿಯು ಸಾಧಕ-ಬಾಧಕಗಳನ್ನು ಅರಿತು ಸಮಿತಿ ನೀಡುವ ಸಲಹೆಗಳ ಆಧಾರದಲ್ಲಿ ಸಾಧನದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ, ಮೀನುಗಾರಿಕಾ ಇಲಾಖೆಯ ನಿರ್ದೇಶಕರ ಮೂಲಕ ಅದನ್ನು ಫಲಾನುಭವಿಗಳಿಗೆ ಒದಗಿಸಲಾಗುವುದು ಎಂದರು.

ಶಾಸಕರಾದ ವೇದವ್ಯಾಸ ಕಾಮತ್‌, ಉಡುಪಿ ಶಾಸಕ ರಘುಪತಿ ಭಟ್‌, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್‌ ಕುಮಾರ್‌, ಕರಾವಳಿ ಕಾವಲು ಪಡೆಯ ಡಿಐಜಿ ವೆಂಕಟೇಶ್‌, ಮೀನುಗಾರಿಕಾ ಇಲಾಖೆಯ ನಿರ್ದೇಶಕ ರಾಮಾಚಾರ್ಯ, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್‌ ಕುಮಾರ್‌, ಉಡುಪಿ ಜಿಲ್ಲೆಯ ಜಂಟಿ ನಿರ್ದೇಶಕ ಗಣೇಶ್‌, ಮಲ್ಪೆ ಮೀನುಗಾರರ ಸಂಘ, ಟ್ರಾಲ್‌ ಬೋಟ್‌, ಪರ್ಸಿನ್‌ ಬೋಚ್‌ ಮೀನುಗಾರರ ಸಂಘ, ಆಳ ಸಮುದ್ರ ಮೀನುಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ : ಸಿಎಂ -Vishwanews24

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

7 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

8 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

8 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

9 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

10 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

10 hours ago