ಉಡುಪಿ,: “ಕೇಂದ್ರ ಸರಕಾರದ ಸಾಗರ್ ಮಾಲಾ ಯೋಜನೆಯಡಿಯಲ್ಲಿ ಸುಮಾರು 800 ಕೋಟಿಯ ವೆಚ್ಚದಲ್ಲಿ ಮರೀನಾ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಇನ್ನೂ ಮಂಜೂರಾಗಿಲ್ಲ ಇದರ ಕುರಿತಾಗಿ ಅಧ್ಯಯನ ಮಾತ್ರ ನಡೆಯುತ್ತಿದೆ” ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು.
ಪಡುಕೆರೆಯಲ್ಲಿ ಮರೀನಾ ಯೋಜನೆಗೆ ವಿರೋದ ವ್ಯಕ್ತವಾದ ಹಿನ್ನಲೆಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, “ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 71 ಲಕ್ಷ ವೆಚ್ಚದಲ್ಲಿ ಪುಣೆಯಲ್ಲಿರುವ ಸಿಡ್ಲ್ಯೂಪಿಆರ್ಎಸ್ ಸಂಸ್ಥೆಯ ವತಿಯಿಂದ ಈ ಯೋಜನೆಯಿಂದ ಇಲ್ಲಿನ ಜನಜೀವನ ಮತ್ತು ಸ್ಥಳೀಯ ಮೀನುಗಾರರಿಗೆ ಏನಾದರೂ ತೊಂದರೆ ಇದೆಯೇ ಎಂಬ ಕುರಿತಾಗಿ ಅಧ್ಯಯನ ಮಾಡಲಾಗುವುದು. ಮುಂದಿನ 8 ತಿಂಗಳಲ್ಲಿ ಇದರ ವರದಿ ಲಭ್ಯವಾಗಲಿದೆ. ತದನಂತರ ಸ್ಥಳಿಯರು ಮತ್ತು ಮೀನುಗಾರರೊಂದಿಗೆ ಚರ್ಚಿಸಿ ಮುಂದಿನ ಯೋಜನೆಯನ್ನು ರೂಪಿಸಲಾಗುವುದು” ಎಂದು ತಿಳಿಸಿದರು.
“ಮೀನುಗಾರ ಮತ್ತು ಸ್ಥಳೀಯರಿಗೆ ಯಾವುದೇ ತೊಂದರೆ ಇಲ್ಲ ಎಂಬಲ್ಲಿ ಮಾತ್ರ ಮರೀನಾ ನಿರ್ಮಾಣ ಮಾಡುತ್ತೇವೆ. ಪರಿಸರಕ್ಕೆ ಯಾವುದೇ ತೊಂದರೆ ಇಲ್ಲ. ಇಡೀ ದೇಶದ ಆರ್ಥಿಕತೆ ಕೊಡುಗೆ ನೀಡುವ ಯೋಜನೆ ಇದು” ಎಂದರು.
http://ಉಡುಪಿ : ವಿದ್ಯಾಪೋಷಕ ವಿದ್ಯಾರ್ಥಿನಿ ಮನೆಗೆ ವಿದ್ಯುತ್ ಸಂಪರ್ಕ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…