ಉಡುಪಿ,: “ಕೇಂದ್ರ ಸರಕಾರದ ಸಾಗರ್ ಮಾಲಾ ಯೋಜನೆಯಡಿಯಲ್ಲಿ ಸುಮಾರು 800 ಕೋಟಿಯ ವೆಚ್ಚದಲ್ಲಿ ಮರೀನಾ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಇನ್ನೂ ಮಂಜೂರಾಗಿಲ್ಲ ಇದರ ಕುರಿತಾಗಿ ಅಧ್ಯಯನ ಮಾತ್ರ ನಡೆಯುತ್ತಿದೆ” ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು.
ಪಡುಕೆರೆಯಲ್ಲಿ ಮರೀನಾ ಯೋಜನೆಗೆ ವಿರೋದ ವ್ಯಕ್ತವಾದ ಹಿನ್ನಲೆಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, “ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 71 ಲಕ್ಷ ವೆಚ್ಚದಲ್ಲಿ ಪುಣೆಯಲ್ಲಿರುವ ಸಿಡ್ಲ್ಯೂಪಿಆರ್ಎಸ್ ಸಂಸ್ಥೆಯ ವತಿಯಿಂದ ಈ ಯೋಜನೆಯಿಂದ ಇಲ್ಲಿನ ಜನಜೀವನ ಮತ್ತು ಸ್ಥಳೀಯ ಮೀನುಗಾರರಿಗೆ ಏನಾದರೂ ತೊಂದರೆ ಇದೆಯೇ ಎಂಬ ಕುರಿತಾಗಿ ಅಧ್ಯಯನ ಮಾಡಲಾಗುವುದು. ಮುಂದಿನ 8 ತಿಂಗಳಲ್ಲಿ ಇದರ ವರದಿ ಲಭ್ಯವಾಗಲಿದೆ. ತದನಂತರ ಸ್ಥಳಿಯರು ಮತ್ತು ಮೀನುಗಾರರೊಂದಿಗೆ ಚರ್ಚಿಸಿ ಮುಂದಿನ ಯೋಜನೆಯನ್ನು ರೂಪಿಸಲಾಗುವುದು” ಎಂದು ತಿಳಿಸಿದರು.
“ಮೀನುಗಾರ ಮತ್ತು ಸ್ಥಳೀಯರಿಗೆ ಯಾವುದೇ ತೊಂದರೆ ಇಲ್ಲ ಎಂಬಲ್ಲಿ ಮಾತ್ರ ಮರೀನಾ ನಿರ್ಮಾಣ ಮಾಡುತ್ತೇವೆ. ಪರಿಸರಕ್ಕೆ ಯಾವುದೇ ತೊಂದರೆ ಇಲ್ಲ. ಇಡೀ ದೇಶದ ಆರ್ಥಿಕತೆ ಕೊಡುಗೆ ನೀಡುವ ಯೋಜನೆ ಇದು” ಎಂದರು.
http://ಉಡುಪಿ : ವಿದ್ಯಾಪೋಷಕ ವಿದ್ಯಾರ್ಥಿನಿ ಮನೆಗೆ ವಿದ್ಯುತ್ ಸಂಪರ್ಕ -Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…