ಉಡುಪಿ: ಸಾಲಮನ್ನಾ ಫಲಾನುಭವಿ ಮೀನುಗಾರ ಮಹಿಳೆಯರಿಂದ ಸಾಲ ಮರುಪಾವತಿಗೆ ಒತ್ತಾಯಿಸದಂತೆ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಸೂಚಿಸಲಾಗಿದ್ದು, ಬ್ಯಾಂಕ್ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ನೀಡಿದ್ದಾರೆ.
ಮೀನುಗಾರ ಮಹಿಳೆಯರು ಈ ಬಗ್ಗೆ ಆತಂಕ, ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮೀನುಗಾರ ಮಹಿಳೆಯರ ಹಿತಾಸಕ್ತಿ ಗಮನದಲ್ಲಿರಿಸಿ ರಾಜ್ಯ ಸರ್ಕಾರ, ಶಾಸಕರ ಮನವಿ ಮೇರೆಗೆ ಕರಾವಳಿ ಮೂರು ಜಿಲ್ಲೆಯ 23 ಸಾವಿರ ಮಹಿಳಾ ಮೀನುಗಾರರ 62 ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿತ್ತು. ಅದರ ಪ್ರಕ್ರಿಯೆ ನಡೆಯುತ್ತಿದೆ.
ಈ ನಡುವೆ ರಾಷ್ಟ್ರೀಕೃತ ಬ್ಯಾಂಕ್ಗಳು ಮಹಿಳೆಯರು ಸಾಲ ಪಾವತಿಸಬೇಕೆಂದು ಒತ್ತಾಯಿಸಿದ್ದು, ಕಟ್ಟದಿದ್ದರೆ ಸುಸ್ತಿ ಸಾಲಗಾರರಾಗುತ್ತೀರಿ. ಮುಂದೆ ಯಾವ ಸಾಲ ಸಿಗುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಈ ಹಿಂದೆ ಸಾಲ ಮರುಪಾವತಿಸಲು ಒತ್ತಡ ಹಾಕದಂತೆ ಬ್ಯಾಂಕ್ಗಳಿಗೆ ಸರ್ಕಾರ ಸೂಚಿಸಿದ್ದರೂ ಮತ್ತೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಗುರುವಾರ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಸಾಲಮನ್ನಾ ಪ್ರಕ್ರಿಯೆ ಸರ್ಕಾರದ ಹಂತದಲ್ಲಿ ನಡೆಯುತ್ತಿದೆ, ಇದಕ್ಕೆ ಕೆಲ ಸಮಯ ಬೇಕಾಗಿದ್ದು, ಶೀಘ್ರ ಸಾಲಮನ್ನಾ ಆಗಲಿದೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…