Featured

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ : ವಿನಯ್‌ ಗುರೂಜಿ -Vishwanews24

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ : ವಿನಯ್‌ ಗುರೂಜಿ -Vishwanews24

ಬೆಂಗಳೂರು: ‘ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ. ಆಯಾ ಸಮಾಜದ ಸ್ವಾಮೀಜಿಗಳು, ಮುಖಂಡರು, ತಜ್ಞರು ಹಾಗೂ ಸಾಮಾನ್ಯ ಜನರ ಅಭಿಪ್ರಾಯಗಳನ್ನು ಆಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿ. ಹಾಗಾದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ’ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿನಯ್‌ ಗುರೂಜಿ ಹೇಳಿದರು.

ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿಯು ಭಾನುವಾರ ಹಮ್ಮಿಕೊಂಡಿದ್ದ ‘ಸಮಾಜದ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ಮತ್ತು ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ಅಭಿನಂದನೆ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

‘ಯಾರಿಗೆ ಅಗತ್ಯವಿದೆಯೊ ಅಂತಹವರಿಗೆ ಸರ್ಕಾರದ ಸವಲತ್ತುಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.

ಆರ್ಯವೈಶ್ಯ ಮಹಾಮಂಡಳಿಯ ಅಧ್ಯಕ್ಷ ಟಿ.ಎ.ಶರವಣ, ‘ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರದ ಮೇಲೆ ಒತ್ತಡ ಹೇರಿ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶ್ರಮಿಸಿದ್ದೇನೆ. ನಾನು ಅಧ್ಯಕ್ಷನಾಗಿದ್ದಾಗ ನಿಗಮಕ್ಕೆ ₹11 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಈಗ ಕೇವಲ ₹5 ಕೋಟಿ ನಿಗದಿ ಮಾಡಲಾಗಿದೆ. ಇದರಲ್ಲಿ ₹1 ಕೋಟಿಯನ್ನು ಆಡಳಿತಾತ್ಮಕ ವೆಚ್ಚಕ್ಕೆ ತೆಗೆದಿಟ್ಟರೆ, ಉಳಿದ ಹಣದಲ್ಲಿ ಯಾವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಗುವುದಿಲ್ಲ’ ಎಂದರು.

ಬ್ರಹ್ಮಶ್ರೀ ಪ್ರಶಸ್ತಿಯನ್ನು ಪಡೆಯಲು ಜನಾರ್ದನ ಪೂಜಾರಿಗಳೇ ಅರ್ಹ ವ್ಯಕ್ತಿ ; ನಾನಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

‘ಬಜೆಟ್‌ನಲ್ಲಿ ಸಮುದಾಯದ ಅಭಿವೃದ್ಧಿಗಾಗಿ ₹100 ಕೋಟಿ ಮೀಸಲಿಡಬೇಕು. ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ನಮ್ಮ ಸಮುದಾಯವನ್ನೂ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು.

ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ‘ಟ್ಯಾಬ್‌ ಪಡೆದವರೆಲ್ಲಾ ಅದನ್ನು ಒಳ್ಳೆಯ ಉದ್ದೇಶಕ್ಕೆ ಬಳಸಬೇಕು. ಸಾಮಾಜಿಕ ಜಾಲತಾಣಗಳಿಂದ ದೂರ ಇರಬೇಕು. ಸಾಧಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಬೆಂಕಿ ಅವಘಡ ; ನಟ ರಿಷಬ್ ಶೆಟ್ಟಿಗೆ ಗಾಯ; ಅಪಾಯದಿಂದ ಪಾರು -Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago