Featured

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ : ವಿನಯ್‌ ಗುರೂಜಿ -Vishwanews24

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ : ವಿನಯ್‌ ಗುರೂಜಿ -Vishwanews24

ಬೆಂಗಳೂರು: ‘ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ. ಆಯಾ ಸಮಾಜದ ಸ್ವಾಮೀಜಿಗಳು, ಮುಖಂಡರು, ತಜ್ಞರು ಹಾಗೂ ಸಾಮಾನ್ಯ ಜನರ ಅಭಿಪ್ರಾಯಗಳನ್ನು ಆಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿ. ಹಾಗಾದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ’ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿನಯ್‌ ಗುರೂಜಿ ಹೇಳಿದರು.

ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿಯು ಭಾನುವಾರ ಹಮ್ಮಿಕೊಂಡಿದ್ದ ‘ಸಮಾಜದ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ಮತ್ತು ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ಅಭಿನಂದನೆ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

‘ಯಾರಿಗೆ ಅಗತ್ಯವಿದೆಯೊ ಅಂತಹವರಿಗೆ ಸರ್ಕಾರದ ಸವಲತ್ತುಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.

ಆರ್ಯವೈಶ್ಯ ಮಹಾಮಂಡಳಿಯ ಅಧ್ಯಕ್ಷ ಟಿ.ಎ.ಶರವಣ, ‘ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರದ ಮೇಲೆ ಒತ್ತಡ ಹೇರಿ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶ್ರಮಿಸಿದ್ದೇನೆ. ನಾನು ಅಧ್ಯಕ್ಷನಾಗಿದ್ದಾಗ ನಿಗಮಕ್ಕೆ ₹11 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಈಗ ಕೇವಲ ₹5 ಕೋಟಿ ನಿಗದಿ ಮಾಡಲಾಗಿದೆ. ಇದರಲ್ಲಿ ₹1 ಕೋಟಿಯನ್ನು ಆಡಳಿತಾತ್ಮಕ ವೆಚ್ಚಕ್ಕೆ ತೆಗೆದಿಟ್ಟರೆ, ಉಳಿದ ಹಣದಲ್ಲಿ ಯಾವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಗುವುದಿಲ್ಲ’ ಎಂದರು.

ಬ್ರಹ್ಮಶ್ರೀ ಪ್ರಶಸ್ತಿಯನ್ನು ಪಡೆಯಲು ಜನಾರ್ದನ ಪೂಜಾರಿಗಳೇ ಅರ್ಹ ವ್ಯಕ್ತಿ ; ನಾನಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

‘ಬಜೆಟ್‌ನಲ್ಲಿ ಸಮುದಾಯದ ಅಭಿವೃದ್ಧಿಗಾಗಿ ₹100 ಕೋಟಿ ಮೀಸಲಿಡಬೇಕು. ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ನಮ್ಮ ಸಮುದಾಯವನ್ನೂ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು.

ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ‘ಟ್ಯಾಬ್‌ ಪಡೆದವರೆಲ್ಲಾ ಅದನ್ನು ಒಳ್ಳೆಯ ಉದ್ದೇಶಕ್ಕೆ ಬಳಸಬೇಕು. ಸಾಮಾಜಿಕ ಜಾಲತಾಣಗಳಿಂದ ದೂರ ಇರಬೇಕು. ಸಾಧಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಬೆಂಕಿ ಅವಘಡ ; ನಟ ರಿಷಬ್ ಶೆಟ್ಟಿಗೆ ಗಾಯ; ಅಪಾಯದಿಂದ ಪಾರು -Vishwanews24

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

29 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

41 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago