ಮುಂಬೈ, : ಕರ್ನಾಟಕ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಮಾನ ಇಲಾಖೆ ಶುಕ್ರವಾರದ ತನಕ ಭಾರೀ ಮಳೆ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ಮುಂಬೈ ಮತ್ತು ಥಾಣೆ ನಗರಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಬೆಳಗ್ಗೆ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಾನ್ಸೂನ್ ಮಳೆ ಪರಿಣಾಮ: ಭಾರತದಲ್ಲಿ ಉದ್ಯೋಗ ದರ ಕುಸಿತ ಬಾಂದ್ರಾ ಪ್ರದೇಶದ ವಿಡಿಯೋವೊಂದನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದಕ್ಕೆ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಆರಿದ್ರಾ ಮಳೆ ಅಬ್ಬರಕ್ಕೆ ಕೊಡಗು ತಲ್ಲಣ, ಭೂಕುಸಿತದ ಆತಂಕ ಸೋಮವಾರದಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಮಳೆ ಜೋರಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಜ್ಜಾಗಿರಬೇಕು ಎಂದು ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ಮಂಗಳವಾರ ಬೆಳಗ್ಗೆ 8.30ರ ವರದಿಯಂತೆ ಮುಂಬೈ ನಗರದಲ್ಲಿ 24 ಗಂಟೆಯಲ್ಲಿ 95.81 ಮಿ. ಮೀ. ಮಳೆಯಾಗಿತ್ತು. ಮಳೆಯಿಂದಾಗಿ ಮುಂಬೈ ನಗರದ ಜೀವನಾಡಿ ರೈಲುಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಮುಂಬೈ ನಗರದ ಮಳೆ ವಿಡಿಯೋ ಥಾಣೆಯಲ್ಲಿಯೂ ಸಹ ಸೋಮವಾರದಿಂದ ಮಳೆಯಾಗುತ್ತಲೇ ಇದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಮುಂಬೈ ಮತ್ತು ಥಾಣೆ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…