ಮಂಗಳೂರು/ಉಡುಪಿ: ಮೆಕುನು ಚಂಡಮಾರುತದ ಪ್ರಭಾವ ತಗ್ಗಿದ ಬೆನ್ನಲ್ಲೇ ಮಂಗಳವಾರ ಕರಾವಳಿಗೆ ಅಬ್ಬರಿಸಿ ಕಾಲಿಟ್ಟ ಮುಂಗಾರು ಮಾರುತಕ್ಕೆ ಅವಿಭಜಿತ ಜಿಲ್ಲೆ ಅಕ್ಷರಶಃ ಬೆಚ್ಚಿದ್ದು,ಇಡೀ ಮಂಗಳೂರು ನಗರ ಮುಳುಗೆದ್ದಿದೆ. ಭಾರಿ ಮಳೆ ಜತೆಗೆ ಉಡುಪಿಯಲ್ಲಿ ಬಿರುಗಾಳಿ ಆರ್ಭಟದಿಂದಾಗಿ ಅಪಾರ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರತ್ಯೇಕ ಮಳೆ ಸಂಬಂಧಿ ಅವಘಡಗಳಲ್ಲಿ ಮೂವರು ಜೀವಬಿಟ್ಟಿದ್ದಾರೆ.
ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಪೂರ್ವ ಮುಂಗಾರು ಚುರುಕುಗೊಂಡಿದ್ದರೂ ಸೋಮವಾರ ರಾತ್ರಿ ಬಳಿಕದ ಚಿತ್ರಣ ಮಳೆಯ ರೌದ್ರ ಸ್ವರೂಪ ನೆನಪಿಸಿದೆ. ಎರಡೂ ಜಿಲ್ಲೆಗಳ ಕರಾವಳಿ ಭಾಗದಲ್ಲಿ ಕುಂಭದ್ರೋಣ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಮತ್ತು ನಗರ ಪ್ರದೇಶದ ಪ್ರಮುಖ ರಸ್ತೆಗಳ ಸಹಿತ ತಗ್ಗುಪ್ರದೇಶ ಜಲಾವೃತಗೊಂಡಿದೆ. ಮಂಗಳೂರಿನಲ್ಲಿ ಮಂಗಳ ವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಂಡ ಮಳೆ ಸಾಯಂಕಾಲ ದವರೆಗೂ ಧಾರಾಕಾರವಾಗಿ ಸುರಿದಿದೆ.
ಕರ್ನಾಟಕದ ಹಲವೆಡೆ ಮಳೆಯಿಂದ ತೊಂದರೆಗೆ ಈಡಾಗಿರುವವರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ. ಹಾನಿಗೀಡಾದ ಪ್ರದೇಶಕ್ಕೆ ನೆರವು ನೀಡುವ ಕುರಿತು ಅಧಿಕಾರಿಗಳೊಂದಿಗೆ ರ್ಚಚಿಸಿದ್ದೇನೆ.
ಪ್ರಧಾನಿ ಮೋದಿ
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…