ಮಂಗಳೂರು/ಉಡುಪಿ: ಮೆಕುನು ಚಂಡಮಾರುತದ ಪ್ರಭಾವ ತಗ್ಗಿದ ಬೆನ್ನಲ್ಲೇ ಮಂಗಳವಾರ ಕರಾವಳಿಗೆ ಅಬ್ಬರಿಸಿ ಕಾಲಿಟ್ಟ ಮುಂಗಾರು ಮಾರುತಕ್ಕೆ ಅವಿಭಜಿತ ಜಿಲ್ಲೆ ಅಕ್ಷರಶಃ ಬೆಚ್ಚಿದ್ದು,ಇಡೀ ಮಂಗಳೂರು ನಗರ ಮುಳುಗೆದ್ದಿದೆ. ಭಾರಿ ಮಳೆ ಜತೆಗೆ ಉಡುಪಿಯಲ್ಲಿ ಬಿರುಗಾಳಿ ಆರ್ಭಟದಿಂದಾಗಿ ಅಪಾರ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರತ್ಯೇಕ ಮಳೆ ಸಂಬಂಧಿ ಅವಘಡಗಳಲ್ಲಿ ಮೂವರು ಜೀವಬಿಟ್ಟಿದ್ದಾರೆ.
ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಪೂರ್ವ ಮುಂಗಾರು ಚುರುಕುಗೊಂಡಿದ್ದರೂ ಸೋಮವಾರ ರಾತ್ರಿ ಬಳಿಕದ ಚಿತ್ರಣ ಮಳೆಯ ರೌದ್ರ ಸ್ವರೂಪ ನೆನಪಿಸಿದೆ. ಎರಡೂ ಜಿಲ್ಲೆಗಳ ಕರಾವಳಿ ಭಾಗದಲ್ಲಿ ಕುಂಭದ್ರೋಣ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಮತ್ತು ನಗರ ಪ್ರದೇಶದ ಪ್ರಮುಖ ರಸ್ತೆಗಳ ಸಹಿತ ತಗ್ಗುಪ್ರದೇಶ ಜಲಾವೃತಗೊಂಡಿದೆ. ಮಂಗಳೂರಿನಲ್ಲಿ ಮಂಗಳ ವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಂಡ ಮಳೆ ಸಾಯಂಕಾಲ ದವರೆಗೂ ಧಾರಾಕಾರವಾಗಿ ಸುರಿದಿದೆ.
ಕರ್ನಾಟಕದ ಹಲವೆಡೆ ಮಳೆಯಿಂದ ತೊಂದರೆಗೆ ಈಡಾಗಿರುವವರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ. ಹಾನಿಗೀಡಾದ ಪ್ರದೇಶಕ್ಕೆ ನೆರವು ನೀಡುವ ಕುರಿತು ಅಧಿಕಾರಿಗಳೊಂದಿಗೆ ರ್ಚಚಿಸಿದ್ದೇನೆ.
ಪ್ರಧಾನಿ ಮೋದಿ
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…