ಮುಂಡ್ಕೂರು: ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಅವರು (60) ಫೆಬ್ರವರಿ 15 ರಂದು ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಾಸರಗೋಡಿನಲ್ಲಿ ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು.
ಮುಂಡ್ಕೂರಿನ ಜಾರಿಗೆ ಕಟ್ಟೆಯಲ್ಲಿ ಕೊರಗಜ್ಜ, ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರದಲ್ಲಿ ನಿರಂತರ ಕೋಲ, ಅಗೇಲು ಸೇವೆಗಳು ನಡೆಯುತ್ತಿದ್ದವು.
ಕ್ಷೇತ್ರದಲ್ಲಿ ಕ್ರೈಸ್ತ, ಮುಸ್ಲಿಂ ಸಮಾಜದ ಬಂಧುಗಳೂ ಹರಕೆಯ ಕೋಲ ಹಾಗೂ ಅಗೇಲು ಸೇವೆ ನೀಡುತ್ತಿದ್ದು, ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರ ಕಾರಣಿಕ ಕ್ಷೇತ್ರವೆನಿಸಿತ್ತು.
ಮೃತರು ಮುಂಡ್ಕೂರು ಪೊಸ್ರಾಲು ಬ್ರಹ್ಮ ಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರಾಗಿದ್ದು, ಇತ್ತೀಚೆಗೆ ಸಂಘದ ನೂತನ ಕಟ್ಟಡ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಮೃತರ ನಿಧನಕ್ಕೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಮುಂಬಯಿನ ಉದ್ಯಮಿ ಐಕಳ ಗಣೇಶ್ ಶೆಟ್ಟಿ, ಕಂಬಳ ಕ್ಷೇತ್ರದ ಬೋಳದಗುತ್ತು ಸತೀಶ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…