ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗುವ ಇಚ್ಛೆಯಿದೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ತಾವು ಖಂಡಿತಾ ತಂಡದ ಕೋಚ್ ಆಗಲು ಬಯಸುತ್ತೇನೆ ಎಂದಿದ್ದಾರೆ. ಸದ್ಯ ಕೋಚ್ ಪದವಿ ಪಡೆಯಲು ಸಾಧ್ಯವಿಲ್ಲ, ಆದರೆ ಮುಂದಿನ ಅವಧಿಯಲ್ಲಿ ತಂಡ ಕೋಚ್ ಆಗಲು ಇಷ್ಟಪಡುತ್ತೇನೆ , ಮುಂದೊಂದು ದಿನ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲಿದ್ದೇನೆ’ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಸದ್ಯ ಗಂಗೂಲಿ ಅವರು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರೂ ಆಗಿದ್ದಾರೆ. ಕ್ರಿಕೆಟ್ ಕಾಮೆಂಟರಿ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಅವರು ಬಂಗಾಳಿ ಕ್ವಿಜ್ ಕಾರ್ಯಕ್ರಮವೊಂದನ್ನೂ ನಡೆಸಿಕೊಡುತ್ತಿದ್ದಾರೆ.
ಟೀಂ ಇಂಡಿಯಾದ ಪ್ರಮುಖ ಯಶಸ್ವಿ ನಾಯಕರಲ್ಲೊಬ್ಬರಾಗಿರುವ ಗಂಗೂಲಿ ಕ್ರಿಕೆಟ್ ಸಲಹಾ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದೇ ಸಮಿತಿ ರವಿ ಶಾಸ್ತ್ರಿ ಅವರನ್ನು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಮಾಡಿತ್ತು.
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ನಂತರ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಇತ್ತೀಚೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಕೋಚ್ ಹುದ್ದೆಗೆ ಅರ್ಜಿ ಕರೆದಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…