ಬಾಗಲಕೋಟೆ : ಮುಂದಿನ ಆರು ತಿಂಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭವಿಷ್ಯ ನುಡಿದಿದ್ದಾರೆ.
ಇಂದು ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ಯಡಿಯೂರಪ್ಪ ಹಿಟ್ಲರ್ ರೀತಿ ನಡೆದುಕೊಳ್ಳುತ್ತಿದ್ದಾರೆ. ನನಗೆ ಬಂದಿರೋ ಮಾಹಿತಿ ಪ್ರಕಾರ 40 ಜನ ಬಿಜೆಪಿ ಶಾಸಕರು ಅಸಮಧಾನಗೊಂಡಿದ್ದಾರೆ. ಖಂಡಿತವಾಗಿಯೂ ಆರು ತಿಂಗಳ ಮೇಲೆ ಬಿಜೆಪಿ ಸರ್ಕಾರ ಇರಲು ಸಾಧ್ಯವಿಲ್ಲ ಎಂದರು.
ಅಕ್ಟೋಬರ್ 24ರಂದು ಉಪಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ಬಿಜೆಪಿ ಸರ್ಕಾರ ಉಳಿಸಿಕೊಳ್ಳಲು 8 ಸ್ಥಾನ ಗೆಲ್ಲಲೇಬೇಕಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ 14 ರಿಂದ 15 ಸ್ಥಾನ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ, ಆರು ತಿಂಗಳು ಬಿಡಿ ಉಪಚುನಾವಣೆ ಫಲಿತಾಂಶ ಬಂದ ಎರಡೇ ದಿನಕ್ಕೆ ಸರಕಾರ ಪತನವಾಗುತ್ತದೆ ಎಂಬುದಾಗಿ ಜಮೀರ್ ತಿಳಿಸಿದರು.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…