ಬೆಂಗಳೂರು: ‘ಮಿಷನ್ ಬೆಂಗಳೂರು- 2022’ ಅಡಿಯಲ್ಲಿ ಎಂಟು ಕ್ಷೇತ್ರಗಳಲ್ಲಿ ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಎರಡು ವರ್ಷಗಳಲ್ಲಿ ಬೆಂಗಳೂರಿನ ಸಂಪೂರ್ಣ ಚಹರೆ ಬದಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ‘ಮಿಷನ್ ಬೆಂಗಳೂರು- 2022’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.
ಸುಗಮ ಸಾರಿಗೆ, ಸ್ವಚ್ಛ ಪರಿಸರ, ವೈಜ್ಞಾನಿಕ ವಿಧಾನದಲ್ಲಿ ಘನ ತ್ಯಾಜ್ಯ ವಿಲೇವಾರಿ, ರಾಜ ಕಾಲುವೆಗಳ ಸಮಗ್ರ ನಿರ್ವಹಣೆ, ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು. ಹೊಸ ಉದ್ಯಾನಗಳು ಮತ್ತು ಬೃಹತ್ ವೃಕ್ಷೋದ್ಯಾನಗಳನ್ನೂ ನಿರ್ಮಿಸಲಾಗುವುದು ಎಂದು ಹೇಳಿದರು.
ನಗರದ ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಮತ್ತು ಎನ್ ಜಿಇಎಫ್ ಕಾರ್ಖಾನೆಗಳ ಜಮೀನಿನಲ್ಲಿ ಕಲೆ, ರಂಗಭೂಮಿಗೆ ಸಂಬಂಧಿಸಿದ ಮ್ಯೂಸಿಯಂ ನಿರ್ಮಿಸಲಾಗುವುದು. ಬೆಂಗಳೂರಿನ ಇತಿಹಾಸ ದಾಖಲಿಸುವ ಮ್ಯೂಸಿಯಂ ಕೂಡ ನಿರ್ಮಾಣವಾಗಲಿದೆ ಎಂದು ಪ್ರಕಟಿಸಿದರು.
ವಾಹನ ದಟ್ಟಣೆ ತಪ್ಪಿಸಲು ನಗರದ ಪ್ರಮುಖ 12 ಮಾರ್ಗಗಳನ್ನು ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲಾಗುವುದು. 400 ಕಿ. ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಸಂಚಾರ ದಟ್ಟಣೆ ವಾಯುವಾಲಿನ್ಯಕ್ಕೂ ಕಾರಣವಾಗಿದೆ. ಸದ್ಯ, ನಮ್ಮ ಮೆಟ್ರೋ 7 ಲಕ್ಷ ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದೆ. ಮುಂದಿನ ಎರಡು ವರ್ಷದಲ್ಲಿ ಹತ್ತು ಲಕ್ಷ ಪ್ರಯಾಣಿಕರಿಗೆ ಅನುಕೂಲ ಮಾಡಲಾಗುವುದು. ಸ್ವಚ್ಛ ಬೆಂಗಳೂರು ಅಡಿಯಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮಾಡಲಾಗ್ತಿದೆ. ನನ್ನ ಕಸ ನನ್ನ ಜವಾಬ್ದಾರಿ ಅನ್ನೋ ಅರಿವು ಮೂಡಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇದಲ್ಲದೆ, ಎರಡು ಬೃಹತ್ ವೃಕ್ಷೋಧ್ಯಾನಗಳ ನಿರ್ಮಾಣ ಮತ್ತು ಹಸಿರು ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.
ಈಗಾಗಲೇ ಆಸ್ತಿ ನೋಂದಣಿಗೆ ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ. ವಲಸಿಗರೇ ಹೆಚ್ಚಾಗಿರುವ ಹಿನ್ನೆಲೆ ನಮ್ಮ ಸಂಸ್ಕೃತಿ ಪರಿಚಿಸಲು ಕೆಲಸ ಮಾಡಲಾಗುವುದು. ಜೊತೆಗೆ, ಬೆಂಗಳೂರು ಒನ್ ಕೇಂದ್ರಗಳ ವ್ಯಾಪ್ತಿ ವಿಸ್ತರಣೆ ಮಾಡಲಾಗುವುದು. ಈ ಕಾರ್ಯಕ್ರಮಳೆಲ್ಲಾ ಎರಡು ವರ್ಷಗಳಲ್ಲಿ ಪೂರ್ತಿ ಆಗಬೇಕು. ಯಾವುದೇ ಕಾರಣಕ್ಕೂ ಹಣಕಾಸಿನ ತೊಂದರೆ ಆಗಬಾರದು ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಸಚಿವರಾದ ಆರ್. ಅಶೋಕ, ಬೈರತಿ ಬಸವರಾಜ, ಕೆ. ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…