Featured

ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ : ಬಿ.ಎಸ್. ಯಡಿಯೂರಪ್ಪ -Vishwanews24

ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ : ಬಿ.ಎಸ್. ಯಡಿಯೂರಪ್ಪ -Vishwanews24

ಬೆಂಗಳೂರು: ‘ಮಿಷನ್ ಬೆಂಗಳೂರು- 2022’ ಅಡಿಯಲ್ಲಿ ಎಂಟು ಕ್ಷೇತ್ರಗಳಲ್ಲಿ ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಎರಡು ವರ್ಷಗಳಲ್ಲಿ ಬೆಂಗಳೂರಿನ ಸಂಪೂರ್ಣ ಚಹರೆ ಬದಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ‘ಮಿಷನ್ ಬೆಂಗಳೂರು- 2022’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ಸುಗಮ ಸಾರಿಗೆ, ಸ್ವಚ್ಛ ಪರಿಸರ, ವೈಜ್ಞಾನಿಕ ವಿಧಾನದಲ್ಲಿ ಘನ ತ್ಯಾಜ್ಯ ವಿಲೇವಾರಿ, ರಾಜ ಕಾಲುವೆಗಳ ಸಮಗ್ರ ನಿರ್ವಹಣೆ, ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು. ಹೊಸ ಉದ್ಯಾನಗಳು ಮತ್ತು ಬೃಹತ್ ವೃಕ್ಷೋದ್ಯಾನಗಳನ್ನೂ ನಿರ್ಮಿಸಲಾಗುವುದು ಎಂದು ಹೇಳಿದರು.

ನಗರದ ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಮತ್ತು ಎನ್ ಜಿಇಎಫ್ ಕಾರ್ಖಾನೆಗಳ ಜಮೀನಿನಲ್ಲಿ ಕಲೆ, ರಂಗಭೂಮಿಗೆ ಸಂಬಂಧಿಸಿದ ಮ್ಯೂಸಿಯಂ ನಿರ್ಮಿಸಲಾಗುವುದು. ಬೆಂಗಳೂರಿನ ಇತಿಹಾಸ ದಾಖಲಿಸುವ ಮ್ಯೂಸಿಯಂ ಕೂಡ ನಿರ್ಮಾಣವಾಗಲಿದೆ ಎಂದು ಪ್ರಕಟಿಸಿದರು.

ವಾಹನ ದಟ್ಟಣೆ ತಪ್ಪಿಸಲು ನಗರದ ಪ್ರಮುಖ 12 ಮಾರ್ಗಗಳನ್ನು ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲಾಗುವುದು. 400 ಕಿ. ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಸಂಚಾರ ದಟ್ಟಣೆ ವಾಯುವಾಲಿನ್ಯಕ್ಕೂ ಕಾರಣವಾಗಿದೆ. ಸದ್ಯ, ನಮ್ಮ ಮೆಟ್ರೋ 7 ಲಕ್ಷ ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದೆ. ಮುಂದಿನ ಎರಡು ವರ್ಷದಲ್ಲಿ ಹತ್ತು ಲಕ್ಷ ಪ್ರಯಾಣಿಕರಿಗೆ ಅನುಕೂಲ ಮಾಡಲಾಗುವುದು. ಸ್ವಚ್ಛ ಬೆಂಗಳೂರು ಅಡಿಯಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮಾಡಲಾಗ್ತಿದೆ. ನನ್ನ ಕಸ ನನ್ನ ಜವಾಬ್ದಾರಿ ಅನ್ನೋ ಅರಿವು ಮೂಡಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇದಲ್ಲದೆ, ಎರಡು ಬೃಹತ್ ವೃಕ್ಷೋಧ್ಯಾನಗಳ ನಿರ್ಮಾಣ ಮತ್ತು ಹಸಿರು ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಈಗಾಗಲೇ ಆಸ್ತಿ ನೋಂದಣಿಗೆ ಆನ್​ಲೈನ್​ ವ್ಯವಸ್ಥೆ ಮಾಡಲಾಗಿದೆ. ವಲಸಿಗರೇ ಹೆಚ್ಚಾಗಿರುವ ಹಿನ್ನೆಲೆ ನಮ್ಮ ಸಂಸ್ಕೃತಿ ಪರಿಚಿಸಲು ಕೆಲಸ ಮಾಡಲಾಗುವುದು. ಜೊತೆಗೆ, ಬೆಂಗಳೂರು ಒನ್ ಕೇಂದ್ರಗಳ ವ್ಯಾಪ್ತಿ ವಿಸ್ತರಣೆ ಮಾಡಲಾಗುವುದು. ಈ ಕಾರ್ಯಕ್ರಮಳೆಲ್ಲಾ ಎರಡು ವರ್ಷಗಳಲ್ಲಿ ಪೂರ್ತಿ ಆಗಬೇಕು. ಯಾವುದೇ ಕಾರಣಕ್ಕೂ ಹಣಕಾಸಿನ ತೊಂದರೆ ಆಗಬಾರದು ಎಂದು ತಿಳಿಸಿದ್ದಾರೆ.

ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ ನಾರಾಯಣ, ಸಚಿವರಾದ ಆರ್. ಅಶೋಕ, ಬೈರತಿ ಬಸವರಾಜ, ಕೆ. ಗೋಪಾಲಯ್ಯ, ಡಾ.ಕೆ.‌ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.‌ವಿಜಯ ಭಾಸ್ಕರ್ ಉಪಸ್ಥಿತರಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago