ಬೆಂಗಳೂರು: ‘ಮಿಷನ್ ಬೆಂಗಳೂರು- 2022’ ಅಡಿಯಲ್ಲಿ ಎಂಟು ಕ್ಷೇತ್ರಗಳಲ್ಲಿ ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಎರಡು ವರ್ಷಗಳಲ್ಲಿ ಬೆಂಗಳೂರಿನ ಸಂಪೂರ್ಣ ಚಹರೆ ಬದಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ‘ಮಿಷನ್ ಬೆಂಗಳೂರು- 2022’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.
ಸುಗಮ ಸಾರಿಗೆ, ಸ್ವಚ್ಛ ಪರಿಸರ, ವೈಜ್ಞಾನಿಕ ವಿಧಾನದಲ್ಲಿ ಘನ ತ್ಯಾಜ್ಯ ವಿಲೇವಾರಿ, ರಾಜ ಕಾಲುವೆಗಳ ಸಮಗ್ರ ನಿರ್ವಹಣೆ, ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು. ಹೊಸ ಉದ್ಯಾನಗಳು ಮತ್ತು ಬೃಹತ್ ವೃಕ್ಷೋದ್ಯಾನಗಳನ್ನೂ ನಿರ್ಮಿಸಲಾಗುವುದು ಎಂದು ಹೇಳಿದರು.
ನಗರದ ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಮತ್ತು ಎನ್ ಜಿಇಎಫ್ ಕಾರ್ಖಾನೆಗಳ ಜಮೀನಿನಲ್ಲಿ ಕಲೆ, ರಂಗಭೂಮಿಗೆ ಸಂಬಂಧಿಸಿದ ಮ್ಯೂಸಿಯಂ ನಿರ್ಮಿಸಲಾಗುವುದು. ಬೆಂಗಳೂರಿನ ಇತಿಹಾಸ ದಾಖಲಿಸುವ ಮ್ಯೂಸಿಯಂ ಕೂಡ ನಿರ್ಮಾಣವಾಗಲಿದೆ ಎಂದು ಪ್ರಕಟಿಸಿದರು.
ವಾಹನ ದಟ್ಟಣೆ ತಪ್ಪಿಸಲು ನಗರದ ಪ್ರಮುಖ 12 ಮಾರ್ಗಗಳನ್ನು ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲಾಗುವುದು. 400 ಕಿ. ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಸಂಚಾರ ದಟ್ಟಣೆ ವಾಯುವಾಲಿನ್ಯಕ್ಕೂ ಕಾರಣವಾಗಿದೆ. ಸದ್ಯ, ನಮ್ಮ ಮೆಟ್ರೋ 7 ಲಕ್ಷ ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದೆ. ಮುಂದಿನ ಎರಡು ವರ್ಷದಲ್ಲಿ ಹತ್ತು ಲಕ್ಷ ಪ್ರಯಾಣಿಕರಿಗೆ ಅನುಕೂಲ ಮಾಡಲಾಗುವುದು. ಸ್ವಚ್ಛ ಬೆಂಗಳೂರು ಅಡಿಯಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮಾಡಲಾಗ್ತಿದೆ. ನನ್ನ ಕಸ ನನ್ನ ಜವಾಬ್ದಾರಿ ಅನ್ನೋ ಅರಿವು ಮೂಡಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇದಲ್ಲದೆ, ಎರಡು ಬೃಹತ್ ವೃಕ್ಷೋಧ್ಯಾನಗಳ ನಿರ್ಮಾಣ ಮತ್ತು ಹಸಿರು ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.
ಈಗಾಗಲೇ ಆಸ್ತಿ ನೋಂದಣಿಗೆ ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ. ವಲಸಿಗರೇ ಹೆಚ್ಚಾಗಿರುವ ಹಿನ್ನೆಲೆ ನಮ್ಮ ಸಂಸ್ಕೃತಿ ಪರಿಚಿಸಲು ಕೆಲಸ ಮಾಡಲಾಗುವುದು. ಜೊತೆಗೆ, ಬೆಂಗಳೂರು ಒನ್ ಕೇಂದ್ರಗಳ ವ್ಯಾಪ್ತಿ ವಿಸ್ತರಣೆ ಮಾಡಲಾಗುವುದು. ಈ ಕಾರ್ಯಕ್ರಮಳೆಲ್ಲಾ ಎರಡು ವರ್ಷಗಳಲ್ಲಿ ಪೂರ್ತಿ ಆಗಬೇಕು. ಯಾವುದೇ ಕಾರಣಕ್ಕೂ ಹಣಕಾಸಿನ ತೊಂದರೆ ಆಗಬಾರದು ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಸಚಿವರಾದ ಆರ್. ಅಶೋಕ, ಬೈರತಿ ಬಸವರಾಜ, ಕೆ. ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…